Homeಮುಖಪುಟ'ಎಂತಹ ಹುಚ್ಚುತನ..'; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ ಜನರು ಗಾಸಿಪ್ ಮಾಡುತ್ತಿದ್ದಾರೆ ಎಂದು ನನಗೆ ನಂಬಲು ಸಾಧ್ಯವಿಲ್ಲ. ಅವರು ನನ್ನ ಹಳೆಯ ಫೋಟೋವನ್ನು ಬಳಸುತ್ತಿದ್ದಾರೆ… ಆ ಚಿತ್ರದಲ್ಲಿ ನನಗೆ 18 ಅಥವಾ 20 ವರ್ಷ ವಯಸ್ಸಾಗಿತ್ತು. ಜನರನ್ನು ವಂಚಿಸಲು ನನ್ನನ್ನು ಭಾರತೀಯ ಎಂದು ಚಿತ್ರಿಸುತ್ತಿದ್ದಾರೆ. ಎಂತಹ ಹುಚ್ಚುತನ! ಇದು ಎಂತಹ ಹುಚ್ಚುತನ, ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ಪ್ರಕಾರ, ಹರಿಯಾಣದಲ್ಲಿ ಮತದಾರರ ಗುರುತಿನ ಚೀಟಿಗಳಲ್ಲಿ ಸೀಮಾ ಮತ್ತು ಸರಸ್ವತಿ ಮುಂತಾದ ವಿವಿಧ ಹೆಸರುಗಳಲ್ಲಿ ಬಳಸಲಾದ ಲಾರಿಸ್ಸಾ ರೋಚಾ ಸಿಲ್ವಾ ಚಿತ್ರವನ್ನು 22 ಬಾರಿ ತೋರಿಸಲಾಗಿದೆ. “ಕಾಂಗ್ರೆಸ್ ಚುನಾವಣೆಯಲ್ಲಿ 22,000 ಮತಗಳಿಂದ ಸೋತಿದೆ. ಆದರೆ ಈ ಮಹಿಳೆ ಯಾರು? ಅವರು ಹರಿಯಾಣದಲ್ಲಿ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ. ಅವರಿಗೆ ಬಹು ಹೆಸರುಗಳಿವೆ” ಎಂದು ರಾಹುಲ್ ಗಾಂಧಿ ತಮ್ಮ ಸುದ್ದಿಗೋಷ್ಠಿಯಲ್ಲಿ ಸಿಲ್ವಾ ಅವರ ಚಿತ್ರವನ್ನು ಪರದೆಯ ಮೇಲೆ “ಯೇ ಕೌನ್ ಹೈ?” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು.

ವೈರಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಲ್ವಾ, ಭಾರತೀಯ ರಾಜಕೀಯ ವಿಷಯದಲ್ಲಿ ನನ್ನ ಫೋಟೋ ಏಕೆ ಪ್ರಸಾರವಾಗುತ್ತಿದೆ ಎಂದು ತನಗೆ ತಿಳಿದಿಲ್ಲ ಎಂದು ಹೇಳಿದರು. “ನೀವು ಮತದಾನಕ್ಕೆ ಸಂಬಂಧಿಸಿದ ಯಾವುದೋ ವಿಷಯಕ್ಕೆ ನನ್ನ ಚಿತ್ರವನ್ನು ಬಳಸುತ್ತಿದ್ದೀರಿ… ಅದು ಚುನಾವಣೆಯೋ ಇಲ್ಲವೋ ನನಗೆ ತಿಳಿದಿಲ್ಲ. ಭಾರತದಲ್ಲಿ, ಜನರು ಪರಸ್ಪರ ಜಗಳವಾಡಲು ನನ್ನನ್ನು ಭಾರತೀಯನೆಂದು ತೋರಿಸುತ್ತಿದ್ದಾರೆ. ಇದು ಎಷ್ಟು ಹುಚ್ಚುತನ ನೋಡಿ! ನಾವು ಎಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿದ್ದೇನೆ” ಎಂದು ಅವರು ಹೇಳಿದರು.

ಈ ಘಟನೆಯ ಬಗ್ಗೆ ಪತ್ರಕರ್ತರು ತಮ್ಮನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಡೆಲ್ ಹೇಳಿದರು. “ಒಬ್ಬ ವರದಿಗಾರ ನನ್ನ ಕೆಲಸದ ಸ್ಥಳಕ್ಕೆ ಕರೆ ಮಾಡಿ ಸಂದರ್ಶನ ಕೇಳಿದ್ದ. ನಾನು ಅವರಿಗೆ ನನ್ನ ನಂಬರ್ ನೀಡಬೇಡಿ ಎಂದು ಹೇಳಿದೆ. ಆದರೆ ಅವರು ನನ್ನನ್ನು ಇನ್‌ಸ್ಟಾಗ್ರಾಮ್‌ ಹುಡುಕಿದ್ದಾರೆ. ನಂತರ ಬೇರೆ ನಗರದ ಸ್ನೇಹಿತರೊಬ್ಬರು ನನಗೆ ಚಿತ್ರವನ್ನು ಕಳುಹಿಸಿ, ‘ನೋಡಿ, ನೀವು ಇದನ್ನು ನಂಬುವುದಿಲ್ಲ!’ ಎಂದು ಹೇಳಿದರು” ಎಂದು ಸಿಲ್ವಾ ಬರೆದಿದ್ದಾರೆ.

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...