HomeUncategorized'ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ': ರಾಹುಲ್ ಗಾಂಧಿ

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ “ಚುನಾವ್ ಚೋರಿ” (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ, ನಾವು ಈ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ನರೇಂದ್ರ ಮೋದಿ ‘ಚುನಾವಣೆ ಕಳ್ಳತನ’ ಮೂಲಕ ಪ್ರಧಾನಿಯಾದರು ಮತ್ತು ಬಿಜೆಪಿ ‘ಚುನಾವಣೆ ಕಳ್ಳತನದಲ್ಲಿ ತೊಡಗಿದೆ ಎಂದು ನಾವು ಭಾರತದ ಜನರಲ್ ಝಡ್ ಮತ್ತು ಯುವಕರಿಗೆ ಸ್ಪಷ್ಟವಾಗಿ ತೋರಿಸುತ್ತೇವೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

‘ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ನಡೆಸಿರುವ ಚುನಾವಣಾ ದುಷ್ಕೃತ್ಯಗಳನ್ನ ಸಮರ್ಥಿಸುತ್ತಿದೆ, ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ’. ‘ಹೈಡ್ರೋಜನ್ ಬಾಂಬ್’ ಬಗ್ಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನೇ “ಕದ್ದಿದ್ದಾರೆ” ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಯ ಡೇಟಾವನ್ನು ಉಲ್ಲೇಖಿಸಿ, 25 ಲಕ್ಷ ನಮೂದುಗಳು ನಕಲಿ ಮತ್ತು ಚುನಾವಣಾ ಆಯೋಗವು ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

ಗುರುವಾರ, ರಾಹುಲ್ “ಮತ ಚೋರಿಯ” ಪುರಾವೆಗಳನ್ನು ಬಲಪಡಿಸುವ ವರದಿಗಳು ಬಿಹಾರದಿಂದ ಬಂದಿವೆ ಎಂದು ಹೇಳಿಕೊಂಡರು. ಈ “ಪ್ರಜಾಪ್ರಭುತ್ವದ ಕೊಲೆ”ಯಲ್ಲಿ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು, ಅವರು “ಸಂವಿಧಾನದ ವಿರುದ್ಧ ಅತಿದೊಡ್ಡ ದ್ರೋಹ” ಮಾಡುತ್ತಿದ್ದಾರೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. 

ಶುಕ್ರವಾರ ಬಿಹಾರದ ಬಂಕಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ವರದಿಗಾರರ ಪ್ರಶ್ನೆಗೆ ಉತ್ತರಿಸಿ, “ಹರಿಯಾಣ ಚುನಾವಣೆಗಳು ಚುನಾವಣೆಗಳೇ ಅಲ್ಲ ಎಂದು ನಾನು ಹೇಳುತ್ತಿದ್ದೇನೆ. ಅಲ್ಲಿ ‘ಸಗಟು ಕಳ್ಳತನ’ ನಡೆಯಿತು. ನಾನು ಮಾಡಿದ ಆರೋಪಗಳಿಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ – ನಕಲಿ ಮತ, ನಕಲಿ ಛಾಯಾಚಿತ್ರ. ಬಿಜೆಪಿ ಇದನ್ನು ಸಮರ್ಥಿಸಿಕೊಳ್ಳುತ್ತಿದೆ ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ” ಎಂದು ಹೇಳಿದರು.

ಮಾಧ್ಯಮಗಳು ನಾನು ಪ್ರಸ್ತುತ ಪಡಿಸಿದ ಉದಾಹರಣೆಗಳನ್ನು ಎತ್ತಿಕೊಳ್ಳುತ್ತಿವೆ ಎಂದು ಅವರು ಹೇಳಿದರು, ಉದಾಹರಣೆಗೆ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮಹಿಳೆಯ ಫೋಟೋವನ್ನು ಹಲವು ಬಾರಿ ಬಳಸಲಾಗಿದೆ. ಆದರೆ, “ಬ್ರೆಜಿಲ್ ಪ್ರಜೆಯ ಫೋಟೋದಲ್ಲಿ ಮತದಾನವನ್ನು ಹೇಗೆ ಮಾಡಲಾಯಿತು?” ಎಂದು ಅವರು ತಿಳಿದುಕೊಳ್ಳಲು ಪ್ರಯತ್ನಿಸಿದರು.  “ವಾಸ್ತವವೆಂದರೆ ನರೇಂದ್ರ ಮೋದಿ ಜಿ, ಅಮಿತ್ ಶಾ ಜಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು ‘ಒಬ್ಬ ವ್ಯಕ್ತಿ, ಒಂದು ಮತ’ ಎಂದು ಹೇಳುತ್ತದೆ. ಹರಿಯಾಣವು ಅಲ್ಲಿ ‘ಒಬ್ಬ ವ್ಯಕ್ತಿ, ಒಂದು ಮತ’ ಇರಲಿಲ್ಲ ಎಂದು ತೋರಿಸುತ್ತದೆ. ಅದು ‘ಒಬ್ಬ ವ್ಯಕ್ತಿ, ಬಹು ಮತಗಳು’… ಅವರು ಬಿಹಾರದಲ್ಲೂ ಅದನ್ನೇ ಮಾಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಇದು ಸಂಭವಿಸಿದೆ…,” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...