Homeಮುಖಪುಟಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ ಎಂದು ವರದಿಯಾಗಿದೆ. ‘ದಾಳಿಕೋರರು ತನ್ನ ಮೇಲೆ ಗುಂಡು ಹಾರಿಸಿ ಅಪಹರಿಸಲು ಪ್ರಯತ್ನಿಸಿದ್ದಾರೆ’ ಎಂದು ಅಂಬೇಡ್ಕರ್ ಹಾಲ್ ನಿವಾಸಿ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಅಮ್ಜಾದ್ ಅಲಿ ಆರೋಪಿಸಿದ್ದಾರೆ.

ಅಮ್ಜಾದ್ ಅವರ ದೂರಿನ ಪ್ರಕಾರ, ಸಂಜೆ 5 ಗಂಟೆ ಸುಮಾರಿಗೆ ತನ್ನ ಸ್ಕೂಟರ್ ನಿಲ್ಲಿಸಿ ಗ್ರಂಥಾಲಯದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪರಿಚಿತ ಮೂವರು ವಿದ್ಯಾರ್ಥಿಗಳೊಂದಿಗೆ ಪರಿಚಿತ ನಾಲ್ವರು ವಿದ್ಯಾರ್ಥಿಗಳು ತನ್ನನ್ನು ಎದುರಿಸಿ, ಮಾತಿನ ಚಕಮಕಿ ನಡೆಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ದಾಳಿಕೋರರಲ್ಲಿ ಒಬ್ಬರು ದೇಶೀಯ ಪಿಸ್ತೂಲ್ ಅನ್ನು ತೋರಿಸಿ ಗುಂಡು ಹಾರಿಸಿದರು, ಅದು ಸ್ವಲ್ಪದರಲ್ಲೇ ತಪ್ಪಿತು. ಗಲಾಟೆಯ ಸಮಯದಲ್ಲಿ, ನನ್ನ ಕೈಗಡಿಯಾರವನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ದೂರು ನೀಡಿದ್ದಾರೆ.

ವಿದ್ಯಾರ್ಥಿ ಚಟುವಟಿಕೆಯಲ್ಲಿ, ವಿಶೇಷವಾಗಿ ಹಿಂದಿನ ಧರಣಿ ಪ್ರತಿಭಟನೆಯ ಸಮಯದಲ್ಲಿ, ತೊಡಗಿಸಿಕೊಂಡಿದ್ದರಿಂದ ತಿಂಗಳುಗಟ್ಟಲೆ ಅದೇ ಗುಂಪಿನಿಂದ ತನಗೆ ಬೆದರಿಕೆ ಇತ್ತು ಎಂದು ಅಮ್ಜಾದ್ ಹೇಳಿದ್ದಾರೆ. “ಅವರು ನನ್ನ ಹಾಸ್ಟೆಲ್ ಬಳಿ ಶಸ್ತ್ರಾಸ್ತ್ರಗಳೊಂದಿಗೆ ಸುತ್ತಾಡುತ್ತಿದ್ದರು, ಕೊಲೆ ಬೆದರಿಕೆ ಹಾಕುತ್ತಿದ್ದರು. ನನ್ನನ್ನು ಕೊಲ್ಲಲು ಯೋಜಿಸುತ್ತಿದ್ದರು” ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ದೂರಿನಲ್ಲಿ ಹೆಸರಿಸಲಾದ ನಾಲ್ವರು ವಿದ್ಯಾರ್ಥಿಗಳು, ಮೂವರು ಅಪರಿಚಿತ ಸಹಚರರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಷಯ ತನಿಖೆಯಲ್ಲಿದೆ ಎಂದು ಇನ್ಸ್‌ಪೆಕ್ಟರ್ ಪಂಕಜ್ ಮಿಶ್ರಾ ದೃಢಪಡಿಸಿದ್ದಾರೆ.

ಆದರೆ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡ ಮತ್ತು ಪೊಲೀಸ್ ತನಿಖೆಯು ಗುಂಡು ಹಾರಿಸುವುದು ಅಥವಾ ಅಪಹರಣಕ್ಕೆ ಯತ್ನಿಸಿದ ಆರೋಪಗಳನ್ನು ದೃಢಪಡಿಸಿಲ್ಲ. ವಿದ್ಯಾರ್ಥಿಗಳ ನಡುವಿನ ವಿವಾದದಿಂದ ಈ ಘಟನೆ ಉದ್ಭವಿಸಿದೆ. ಎರಡೂ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ಡೆಪ್ಯೂಟಿ ಪ್ರೊಕ್ಟರ್ ಪ್ರೊ. ಹಶ್ಮತ್ ಅಲಿ ಹೇಳಿದರು.

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...