Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...