Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...