Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...