Homeಮುಖಪುಟದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

- Advertisement -
- Advertisement -

ಗ್ವಾಲಿಯರ್ : ಕಳೆದ ತಿಂಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಭಿಂಡ್ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠ ಶುಕ್ರವಾರ ತಿರಸ್ಕರಿಸಿದೆ. ಕೆಲವು ಮೇಲ್ಜಾತಿಯ ಯುವಕರು ದಲಿತ ಯುವಕನನ್ನು ಅಪಹರಿಸಿ, ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದ ಅಮಾನವೀಯ ಘಟನೆಯಿಂದ ಚಂಬಲ್ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಅದರ ನಡುವೆಯೇ ಈ ಕ್ರಮ ಕೈಗೊಳ್ಳಲಾಗಿದೆ.

ಭಿಂಡ್ ಜಿಲ್ಲೆಯ ದಲಿತ ಯುವಕನೊಬ್ಬ, ಮೇಲ್ಜಾತಿಯ ವ್ಯಕ್ತಿಗಳ ಬೊಲೆರೋ ಗಾಡಿಯನ್ನು ಓಡಿಸಲು ನಿರಾಕರಿಸಿದ ಕಾರಣ ಆತನನ್ನು ಅಪಹರಿಸಿ, ಕಾಲುಗಳನ್ನ ಕಟ್ಟಿ, ಥಳಿಸಿ, ಆತನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ಹಲ್ಲೆ ಮಾಡಲಾಗಿತ್ತು. 

ಸೋನು ಬರುವಾ, ಅಲೋಕ್ ಶರ್ಮಾ ಮತ್ತು ಛೋಟು ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು.

ದಲಿತ ಯುವಕನ ಮೇಲಾದ ಈ ಅಮಾನವೀಯ ದಾಳಿಯನ್ನು ಖಂಡಿಸಿ, ಆಜಾದ್ ಸಮಾಜ ಪಕ್ಷ ಮತ್ತು ಭೀಮ್ ಆರ್ಮಿಯಂತಹ ಗುಂಪುಗಳು ಆತನ ಬೆಂಬಲಕ್ಕೆ ನಿಂತವು, ಆದರೆ ಹಲವಾರು ಹಿಂದೂ ಸಂಘಟನೆಗಳು ಆರೋಪಗಳನ್ನು ಕಟ್ಟುಕಥೆ ಎಂದು ತಳ್ಳಿಹಾಕಿ, ಆರೋಪಿಗಳಿಗೆ ಬೆಂಬಲ ಸೂಚಿಸಿದ್ದವು.

ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಭಿಂಡ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಹೊರಗೆ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಪ್ರತಿಭಟನೆ ನಡೆಸಿದರು.

ನಂತರ ಆರೋಪಿಗಳು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದರು, ಆದರೆ ದಾಳಿಗೆ ಒಳಗಾಗಿದ್ದ ಯುವಕ ಈ ಮನವಿಯನ್ನು ಬಲವಾಗಿ ವಿರೋಧಿಸಿದರು. “ಜಾಮೀನು ನೀಡುವುದರಿಂದ ಇದೇ ರೀತಿಯ ಅಪರಾಧಗಳಿಗೆ ಪ್ರೋತ್ಸಾಹ ದೊರೆಯುತ್ತದೆ ಮತ್ತು ಆರೋಪಿಗಳಿಗೆ ಧೈರ್ಯ ತುಂಬುತ್ತದೆ” ಎಂದು ಸಂತ್ರಸ್ತರ ಪರ ವಕೀಲ ಅನಿಲ್ ಕುಮಾರ್ ಜಾಟವ್ ನ್ಯಾಯಾಲಯದ ಮುಂದೆ ವಾದಿಸಿದರು. “ಇಂತಹ ಘಟನೆಗಳು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಜಾಮೀನು ನೀಡಿದರೆ, ಅಪರಾಧ ಕೃತ್ಯಗಳತ್ತ ಒಲವು ಹೊಂದಿರುವ ಇತರ ವ್ಯಕ್ತಿಗಳು ಈ ಅಪರಾಧಗಳನ್ನು ಪುನರಾವರ್ತಿಸಬಹುದು” ಎಂದು ಅವರು ಹೇಳಿದರು.

ವಾದಗಳನ್ನು ಪರಿಗಣಿಸಿದ ನಂತರ, ಹೈಕೋರ್ಟ್ ಜಾಮೀನು ಆಕ್ಷೇಪಣೆಯನ್ನು ಎತ್ತಿಹಿಡಿದು, ಆರೋಪಿಗಳ ಅರ್ಜಿಯನ್ನು ತಿರಸ್ಕರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...