Homeಕರ್ನಾಟಕದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌

- Advertisement -
- Advertisement -

ಪುಟಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್‌

ಇಂದಿನ ರಾಜ್ಯಾಡಳಿತದ ಸಾಂಸ್ಥಿಕತೆಯು ರೂಪುಗೊಂಡಿರುವುದು ಅಂದಿನ ಬುಡಕಟ್ಟು ಸಮುದಾಯಗಳ ಸಮಾಧಿಗಳ ಮೇಲೆ. ಈ ಸ್ಪಷ್ಟತೆಯ ಅರಿವಿನ ಮೇಲೆಯೇ ದೇವಿಪ್ರಸಾದ್ ಚಟ್ಟೋಪಾಧ್ಯಾಯ ಭಾರತದಲ್ಲಿ ಬುಡಕಟ್ಟುಗಳ ಸಂಸ್ಕೃತಿ ಮತ್ತು ಸಮಾಜದ ಆಳ, ಎತ್ತರಗಳನ್ನು ಶೋಧಿಸುತ್ತಾ ಹೋಗುತ್ತಾರೆ.

ಬಹಳ ಮುಖ್ಯವಾಗಿ ವೈದಿಕ ಸಮುದಾಯದಿಂದ ಇಂದು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿರುವ ಅನೇಕ ಪರಿಕಲ್ಪನೆಗಳ ಸಾಮಾಜಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಚರಿತ್ರೆಯನ್ನು ನಿಖರ ಮಾಹಿತಿಗಳ ಮೂಲಕ ಅರಿವಿಗೆ ಗ್ರಾಸ ಒದಗಿಸುತ್ತಾರೆ.

ಲೋಕಾಯತ, ಹೆಸರೇ ಧ್ವನಿಸುವಂತೆ, ಕೃತಿಯು ಬರೀ ಭೌತವಾದಕ್ಕೆ ಸೀಮಿತವಾಗುವುದಿಲ್ಲ. ಇಂದಿನ ಭಾರತದಲ್ಲಿ ಪ್ರಚಲಿತದಲ್ಲಿರುವ ಅನೇಕಾನೇಕ ಪರಿಕಲ್ಪನೆಗಳ ಉಗಮ, ಬೆಳವಣಿಗೆ ಮತ್ತು ರೂಪಾಂತರಗೊಂಡಿರುವುದರ ಬಗ್ಗೆ ಯಾವುದೇ ಸೃಜನಶೀಲ ಕಾದಂಬರಿಗಿಂತ ರೋಚಕತೆಯನ್ನು ನೀಡುತ್ತದೆ. ನಾವು ಯಾವುದನ್ನೋ ತಲೆತಲಾಂತರಗಳಿಂದ ಶ್ರೇಷ್ಠವೆಂದೋ, ಪವಿತ್ರವೆಂದೋ ಶ್ರದ್ಧೆಯಿಂದ ನಂಬಿಕೊಂಡು ಬಂದಿರುವುದು, ಅದೇ ನಾವು ಯಾವುದನ್ನು ಕನಿಷ್ಟ ಅಥವಾ ನೀಚ ಎಂದು ಅಂದುಕೊಂಡಿದ್ದೇವೋ, ಅದೇ ಆ ಪಾವಿತ್ರ‍್ಯತೆಯ ಉಗಮವೆಂದು ತಿಳಿದಾಗ ಅಚ್ಚರಿಯಾಗುತ್ತದೆ.

ಅತಿ ಮುಖ್ಯವಾಗಿ ಯಾವ ರಾಕ್ಷಸರನ್ನು ಕ್ರೂರಿಗಳೆಂದು, ದುಷ್ಟರೆಂದು ಪೌರಾಣಿಕ ಕಥನಗಳು ವಿವರಿಸಿಕೊಂಡು ಮತ್ತು ನಂಬಿಸಿಕೊಂಡು ಬಂದಿದ್ದವೋ ಅದಕ್ಕೆ ವ್ಯತಿರಿಕ್ತವಾಗಿ ಅವರು ಅರಣ್ಯಕರೆಂದು, ಬುಡಕಟ್ಟಿನವರೆಂದು ತಿಳಿದುಬರುತ್ತದೆ. ಜೊತೆಗೆ ಅವರ ಅಸ್ತಿತ್ವಕ್ಕಾಗಿ ಮತ್ತು ಉಳಿವಿಗಾಗಿ ಮಾಡಿದಂತಹ ಅನಿವಾರ್ಯದ ಕದನಗಳು, ಪ್ರತಿಭಟನೆಗಳೆಲ್ಲಾ ಇಂದು ಪೀಡೆಗಳನ್ನಾಗಿ ಬಿಂಬಿಸಿರುವ ಕಾರಣಗಳು ಸ್ಪಷ್ಟವಾಗುತ್ತದೆ.

ಇನ್ನು ಧಾರ್ಮಿಕವಾಗಿ ಗುರುತಿಸಲ್ಪಡುವ ಗೋತ್ರಗಳು ಟೋಟಮ್ ಅಥವಾ ಪ್ರಾಣಿ ಲಾಂಛನದ ಬುಡಕಟ್ಟು ಅಧ್ಯಯನಗಳ ಕಡೆಗೆ ಹೊರಳುತ್ತವೆ. ಅಲ್ಲೇ ಸ್ವಾರಸ್ಯವೂ ಇರುವುದು. ಕಶ್ಯಪ, ಗೌತಮ, ಭಾರಧ್ವಜ ಇತ್ಯಾದಿ ಬ್ರಾಹ್ಮಣ ಗೋತ್ರದವರ ಮೂಲ ಆಮೆ, ಗೂಬೆ ಮತ್ತು ಇತರ ಕಾಡಿನ ಪ್ರಾಣಿ, ಪಕ್ಷಿ ಮತ್ತು ಮರಗಿಡಗಳ ಗುರುತುಗಳನ್ನು ಹೊಂದಿರುವ ಬುಡಕಟ್ಟು ಪಂಗಡಗಳು.

ಹಾಗೆಯೇ ತಾಯಾಳಿಕೆಯ ಜಾಡು ಹಿಡಿದು ಗೌರಿಯ ಸ್ತ್ರೀ ತತ್ವದ ಎಳೆಗಳಿಂದ ವ್ರತ ಮತ್ತು ವ್ರಾತ್ಯ ಇತ್ಯಾದಿಗಳ ತಿಳಿವಳಿಕೆ ನೀಡುತ್ತಾ ಕೃಷಿಯನ್ನು ಆರಂಭ ಮಾಡಿದ್ದು ಹೆಂಗಸು ಎಂಬ ಅಂಶವನ್ನು ಹೊರಗೆಡವುತ್ತಾರೆ.

ಆದಿಪೂಜಿತ ಗಣಪತಿಯ ಗಾಣಪತ್ಯದ ರಹಸ್ಯವನ್ನು ಹೊರಗೆಡವುತ್ತಾರೆ. ವಿನಾಯಕನ ಬಗ್ಗೆ ಏನೆಲ್ಲಾ ಭಯಭಕ್ತಿಗಳನ್ನು ಇಟ್ಟುಕೊಂಡಿರುವ ಜನರಿಗೆ ಇದೇ ವಿನಾಯಕ ದುಃಸ್ವಪ್ನದ ಕುರುಹಾಗಿದ್ದರ ಬಗ್ಗೆ ಬೆಚ್ಚಿಬೀಳಿಸದೇ ಇರದು. ಇಂದು ಗಣಪತಿಯ ಬಗ್ಗೆ ಏನೇನೆಲ್ಲಾ ಶುಭ ಎಂದು ಕಾಣುತ್ತೇವೋ ಅದೆಲ್ಲವೂ ಅರಣ್ಯಕಗಳಲ್ಲಿ, ಯಾಜ್ಞವಲ್ಯ ಸ್ಮೃತಿಯಲ್ಲಿ, ಬ್ರಾಹ್ಮಣಗಳಲ್ಲಿ ಅಷ್ಟೇ ಅಶುಭವಾಗಿ, ಕೀಳಾಗಿ ಕಾಣುತ್ತಿದ್ದ ಉಲ್ಲೇಖಗಳನ್ನು ಕಾಣಿಸುತ್ತಾರೆ.

ಮಾನವಶಾಸ್ತ್ರೀಯ ಅಧ್ಯಯನಕ್ಕೆ ನೆರವಾಗುತ್ತಲೇ ಭಾರತದ ಧಾರ್ಮಿಕ, ಆಧ್ಯಾತ್ಮಿಕ, ತಾತ್ವಿಕ, ಸಾಂಸ್ಕೃತಿಕ ಚರಿತ್ರೆಗಳನ್ನು ಇಂದು ಯಾವ ಪ್ರತಿಕೃತಿಗಳಲ್ಲಿ ಕಾಣುತ್ತಿದ್ದೇವೆ ಎಂಬ ಅರಿವು ಮೂಡಿಸುವ ಮಹಾನ್ ವಿದ್ವಾಂಸ ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ದೇವಿಪ್ರಸಾದ್ ಚಟ್ಟೋಪಾಧ್ಯಾಯ.

ಬರಿಯ ಪೌರಾಣಿಕತೆಯ ಆಯಾಮದಿಂದಷ್ಟೇ ಧಾರ್ಮಿಕತೆಯ ಶ್ರದ್ಧೆಯನ್ನು ಕಟ್ಟಿಕೊಂಡವರಿಗೆ ಲೋಕಾಯತ ಗಾಬರಿ ಬೀಳಿಸದೇ ಇರದು. ಆದರೆ ಯಾವುದೇ ಸಂಪ್ರದಾಯ, ಆಚರಣೆ ಮತ್ತು ಧಾರ್ಮಿಕ ವಿಧಿವಿಧಾನಗಳ ಜಾಡು ಹಿಡಿದು ಹೊರಟರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚರಿತ್ರೆಗಳು ಒಂದಷ್ಟು ಧೂಳೊದರಿಕೊಂಡು ಬೆಳಕಿಗೆ ಬರುತ್ತವೆ. ಅದು ಅದೇ ಪರಿಕಲ್ಪನೆಗಳ ಆಧಾರದಲ್ಲಿ ಇಂದು ನಡೆಯುತ್ತಿರುವ ಶೋಷಣೆಗಳೂ ಅರಿವಿಗೆ ನಿಲುಕುತ್ತವೆ. ಪೌರಾಣಿಕ ಕಥನಗಳ ರೂಪಕಗಳನ್ನು ತಿಳಿಯಲು, ಒಗಟುಗಳನ್ನು ಬಿಡಿಸಲು ನೆರವಾಗುತ್ತವೆ.

ಲೋಕಾಯತದ ಪುಟಪುಟವೂ ಸಾಂಸ್ಕೃತಿಕ ಚರಿತ್ರೆ ಮತ್ತು ಒಳನೋಟಗಳ ಬಳುವಳಿಗಳೇ.

ನವಕರ್ನಾಟಕ ಪ್ರಕಾಶನದಲ್ಲಿ ಈ ಕೃತಿ ಕನ್ನಡದಲ್ಲಿಯೂ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...