Homeಮುಖಪುಟಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

- Advertisement -
- Advertisement -

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ (ನ.8) ತನಿಖೆಗೆ ಆದೇಶಿಸಿದೆ.

ಗುರುವಾರ (6) ನಡೆದ ಮೊದಲ ಹಂತದ ಮತದಾನಕ್ಕೂ ಮುನ್ನ ನಡೆದ ಅಣಕು ಮತದಾನದ ವೇಳೆ ಬಳಸಲಾದ ಸ್ಲಿಪ್‌ಗಳು ಇವು ಎಂದು ತಿಳಿದು ಬಂದಿರುವುದಾಗಿ ವರದಿಗಳು ಹೇಳಿವೆ.

ಈ ಬಗ್ಗೆ ಮಾಹಿತಿ ಪಡೆದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಮಸ್ತಿಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಅವು ಅಣಕು ಮತದಾನದ ವಿವಿಪ್ಯಾಟ್ ಚೀಟಿಗಳಾಗಿರುವುದರಿಂದ ಮತದಾನ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳಿಗೂ ಡಿಎಂ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ನಿರ್ಲಕ್ಷ್ಯಕ್ಕಾಗಿ ಸಂಬಂಧಪಟ್ಟ ಎಆರ್‌ಒ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಮತ್ತು ಎಫ್‌ಐಆರ್ ದಾಖಲಿಸಲಾಗುತ್ತಿದೆ” ಎಂದು ಇಸಿಐ ತಿಳಿಸಿದೆ.

ಕಾಲೇಜು ಬಳಿ ಹೆಚ್ಚಿನ ಸಂಖ್ಯೆಯ ಮುದ್ರಿತ ವಿವಿಪ್ಯಾಟ್ ಸ್ಲಿಪ್‌ಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ ನಂತರ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ. ಪ್ರಾಥಮಿಕ ತನಿಖೆಯ ನಂತರ ಅಧಿಕಾರಿಗಳು, ಇವು ಮೊದಲ ಹಂತದ ಮತದಾನಕ್ಕೂ ಮುನ್ನ ನಡೆಸಿದ ಅಣಕು ಮತದಾನದ ಪ್ರಕ್ರಿಯೆಗೆ ಸಂಬಂಧಿಸಿದ್ದು ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರೈರಂಜನ್ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ವಿವಿಪ್ಯಾಟ್ ಚೀಟಿಗಳು ಕಂಡುಬಂದಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಸಮಸ್ತಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರೋಷನ್ ಕುಶ್ವಾಹ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಕಮಿಷನಿಂಗ್ ಅಂಡ್ ಡಿಸ್ಪ್ಯಾಚ್ ಸೆಂಟರ್‌ನಲ್ಲಿ (ಚುನಾವಣಾ ಸಾಮಗ್ರಿಗಳನ್ನು ತಯಾರು ಮಾಡಿ ಕಳುಹಿಸುವ ಕೇಂದ್ರ) ಬಹಳಷ್ಟು ಚೂರುಚೂರಾಗಿ ಹರಿದು ಹಾಕಿರುವ ಕಾಗದದ ತುಂಡುಗಳ (ಶ್ರೆಡೆಡ್ ಸ್ಲಿಪ್ಸ್) ನಡುವೆ, ಕೆಲವು ಸಂಪೂರ್ಣವಾಗಿ ಹರಿಯದೇ ಉಳಿದಿದ್ದ ವಿವಿಪ್ಯಾಟ್‌ ಸ್ಲಿಪ್‌ಗಳು ಪತ್ತೆಯಾಗಿವೆ. ಆಡಳಿತವು ಆ ಸ್ಲಿಪ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ವಶಪಡಿಸಿಕೊಂಡಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ತನಿಖೆಯಿಂದ ಹರಿದು ಹಾಕಿದ್ದ ಸ್ಲಿಪ್‌ಗಳ ನಿಖರ ಸ್ವರೂಪವನ್ನು ಕಂಡು ಹಿಡಿಯಲಾಗುತ್ತದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದ್ದು, ವಿಚಾರಣೆಯ ನಂತರ ಎಲ್ಲಾ ವಿವರಗಳು ಸ್ಪಷ್ಟವಾಗುತ್ತವೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

“ಶೇಕಡ 5ರಷ್ಟು ಮತ ಯಂತ್ರಗಳಲ್ಲಿ ಅಣಕು ಮತದಾನವನ್ನು ನಡೆಸಲಾಗುತ್ತದೆ. ಪರೀಕ್ಷೆಯ ಭಾಗವಾಗಿ ಪ್ರತಿಯೊಂದರಲ್ಲೂ ಸುಮಾರು 1,000 ಮತಗಳು ಚಲಾವಣೆಯಾಗುತ್ತವೆ. ಹೆಚ್ಚುವರಿಯಾಗಿ, ಕಾರ್ಯಾರಂಭದ ಸಮಯದಲ್ಲಿ, ಸರಿಯಾದ ಚಿಹ್ನೆಯನ್ನು ಲೋಡ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಪ್ರತಿಯೊಬ್ಬ ಅಭ್ಯರ್ಥಿಯ ಗುಂಡಿಯನ್ನು ಒತ್ತಲಾಗುತ್ತದೆ. ಈ ಅಣಕು ಮತದಾನಗಳು ಗಮನಾರ್ಹ ಸಂಖ್ಯೆಯ ವಿವಿಪ್ಯಾಟ್ ಚೀಟಿಗಳನ್ನು ಉತ್ಪಾದಿಸುತ್ತವೆ. ಇವುಗಳಲ್ಲಿ, ಕೆಲವು ಚೂರುಚೂರು ಮತ್ತು ಕೆಲವು ಚೂರುಚೂರು ಮಾಡದ ಚೀಟಿಗಳು ಕಂಡುಬಂದಿವೆ. ಈ ವಿಷಯ ತನಿಖೆಯಲ್ಲಿದೆ ಮತ್ತು ಹೊಣೆಗಾರರ ​​ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಸಿಇಸಿ ನಿರ್ದೇಶನದ ನಂತರ, ಚುನಾವಣಾ ಸಾಮಗ್ರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾ ಅಧಿಕಾರಿ (ಎಆರ್‌ಒ) ಅವರನ್ನು ಅಮಾನತುಗೊಳಿಸಲಾಗಿದೆ.

ಅಣಕು ಮತದಾನ ಚೀಟಿಗಳನ್ನು ಹೇಗೆ ಸರಿಯಾಗಿ ವಿಲೇವಾರಿ ಮಾಡಲಾಗಿಲ್ಲ ಮತ್ತು ಅವುಗಳ ವಿಲೇವಾರಿಯಲ್ಲಿ ಯಾವುದೇ ಕಾರ್ಯವಿಧಾನದ ಲೋಪವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ವಿವಿಪ್ಯಾಟ್‌ ಸ್ಲಿಪ್‌ಗಳು ರಸ್ತೆ ಬದಿ ಪತ್ತೆಯಾದ ಬಗ್ಗೆ ಆರ್‌ಜೆಡಿ ಪಕ್ಷ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಮಸ್ತಿಪುರದ ಸರೈರಂಜನ್ ವಿಧಾನಸಭಾ ಕ್ಷೇತ್ರದ ಕೆಎಸ್‌ಆರ್ ಕಾಲೇಜು ಬಳಿಯ ರಸ್ತೆಯಲ್ಲಿ ಇವಿಎಂಗಳಿಂದ ಹೊರಬರುವ ವಿವಿಪ್ಯಾಟ್ ಸ್ಲಿಪ್‌ಗಳು ಬಾರಿ ಸಂಖ್ಯೆಯಲ್ಲಿ ಕಂಡುಬಂದಿವೆ. ಯಾವಾಗ, ಹೇಗೆ, ಏಕೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸ್ಲಿಪ್‌ಗಳನ್ನು ಎಸೆಯಲಾಯಿತು? ‘ಕಳ್ಳ ಆಯೋಗ’ ಇದಕ್ಕೆ ಉತ್ತರಿಸುತ್ತದೆಯೇ? ಬಿಹಾರದಲ್ಲಿ ಹೊರಗಿನಿಂದ ಬೀಡುಬಿಟ್ಟಿರುವ ‘ಪ್ರಜಾಪ್ರಭುತ್ವದ ಡಕಾಯಿತ’ನ ನಿರ್ದೇಶನದ ಮೇರೆಗೆ ಇದೆಲ್ಲವೂ ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...