Homeಮುಖಪುಟವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

- Advertisement -
- Advertisement -

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

“ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೋಮು ಸಿದ್ಧಾಂತ ತುರುಕಿಸಲು ರೈಲ್ವೆಯನ್ನು ಬಳಸಲಾಗುತ್ತಿದೆ” ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಸರ್ಕಾರಿ ಕಾರ್ಯಕ್ರಮ ಕೂಡ ‘ಕೇಸರೀಕರಣ’ದಿಂದ ಹೊರತಾಗಿಲ್ಲ, ಇದು ಒಪ್ಪುವಂತದಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಮುಖ್ಯಮಂತ್ರಿ ‘ಮಕ್ಕಳ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕನ್ನು’ ಅಗೌರವಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ ರೈಲಿನ ಮೊದಲ ಸಂಚಾರದ ವೇಳೆ ಕೊಚ್ಚಿಯ ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಇಪ್ಪತ್ತು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ‘ಪರಮಪವಿತ್ರಮಥಮೀ ಮನ್ನಿಲ್ ಭಾರತಾಂಬಾಯೆ ಪೂಜಿಕ್ಕಾನ್’ ಗೀತೆ ಹಾಡಿದ್ದಾರೆ. ಇದರ ವಿಡಿಯೋವನ್ನು ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ ಎಂದು ವರದಿಗಳು ಹೇಳಿವೆ.

ನಾವು ದಕ್ಷಿಣ ರೈಲ್ವೆಯ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋ ಕಂಡು ಬಂದಿದೆ. “ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರದ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಶಾಲಾ ಗೀತೆಯನ್ನು ಸುಂದರವಾಗಿ ಹಾಡಿದರು” ಎಂದು ವಿಡಿಯೋ ಜೊತೆಗೆ ರೈಲ್ವೆ ಬರೆದುಕೊಂಡಿದೆ.

ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿದೆ ಮತ್ತು ಆರ್‌ಎಸ್‌ಎಸ್‌ನ ಶಿಕ್ಷಣ ವಿಭಾಗವಾದ ವಿದ್ಯಾ ಭಾರತಿಯ ಕೇರಳ ಘಟಕ ಭಾರತೀಯ ವಿದ್ಯಾನಿಕೇತನ ಅಡಿಯಲ್ಲಿ ಬರುತ್ತದೆ.

ವಿವಾದದ ಕುರಿತು ಶಾಲೆಯ ಪ್ರಾಂಶುಪಾಲ ಕೆ.ಪಿ. ಡಿಂಟೊ ಪ್ರತಿಕ್ರಿಯಿಸಿದ್ದು, “ಹಾಡನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಯಾವುದೇ ಪಾತ್ರ ವಹಿಸಿಲ್ಲ ಎಂಬುವುದಾಗಿ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಟಿವಿ ಚಾನೆಲ್ ತಂಡದವರು ವಿದ್ಯಾರ್ಥಿಗಳೊಂದಿಗೆ ಹಾಡು ಹಾಡಲು ವಿನಂತಿಸಿದರು. ವಿದ್ಯಾರ್ಥಿಗಳು ವಂದೇ ಮಾತರಂ ಹಾಡಲು ಪ್ರಾರಂಭಿಸಿದಾಗ, ಟಿವಿ ಚಾನೆಲ್‌ನವರು ಮಲಯಾಳಂ ಹಾಡು ಹಾಡುವಂತೆ ಹೇಳಿದರು. ಟಿವಿ ತಂಡದ ಕೋರಿಕೆಯ ಮೇರೆಗೆ ಮಕ್ಕಳು ವಿವಿಧತೆಯಲ್ಲಿ ಏಕತೆಯನ್ನು ಆಚರಿಸುವ ಹಾಡನ್ನು ಹಾಡಿದ್ದಾರೆ”
ಎಂದು ಡಿಂಟೊ ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ.

“ವಿದ್ಯಾರ್ಥಿಗಳನ್ನು ಅವಮಾನಿಸಲು ಹಾಡಿನ ಕುರಿತು ವಿವಾದ ಸೃಷ್ಟಿಸಲಾಗಿದೆ. ಹಾಡು ರಾಷ್ಟ್ರೀಯತೆಯ ವಿರುದ್ಧವಾಗಿರಲಿಲ್ಲ ಮತ್ತು ರೈಲ್ವೆ ಹಾಡುವಂತೆ ವಿದ್ಯಾರ್ಥಿಗಳನ್ನು ಕೇಳಿರಲಿಲ್ಲ” ಎಂದು ಡಿಂಟೊ ತಿಳಿಸಿದ್ದಾರೆ.

“ವಂದೇ ಭಾರತ್ ರೈಲಿನ ಚಾಲನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆರ್‌ಎಸ್‌ಎಸ್ ಗೀತೆ ಹಾಡಿಸಿರುವುದು ಅತ್ಯಂತ ಖಂಡನೀಯ’. ಕೋಮು ಸಿದ್ಧಾಂತ ಮತ್ತು ದ್ವೇಷ ಹರಡುವಿಕೆಗೆ ಹೆಸರುವಾಸಿಯಾದ ಸಂಘಟನೆಯ ಗೀತೆಯನ್ನು ಅಧಿಕೃತ ಕಾರ್ಯಕ್ರಮದಲ್ಲಿ ಹಾಡಿಸಿರುವುದು ಸಾಂವಿಧಾನಿಕ ತತ್ವಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡಿರುವುದು ಸಂಘ ಪರಿವಾರದ ರಾಜಕೀಯವು ಪ್ರಮುಖ ರಾಷ್ಟ್ರೀಯ ಸಂಸ್ಥೆಗಳನ್ನು ಹೇಗೆ ನಾಶಪಡಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ” ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಘಟನೆಯ ಕುರಿತು ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆರ್‌ಎಸ್‌ಎಸ್ ಕಾರ್ಯಕ್ರಮವಾಗಿ ಪರಿವರ್ತಿಸಲಾಗಿದೆ. ದಕ್ಷಿಣ ರೈಲ್ವೆಯ ಅಧಿಕೃತ ಎಕ್ಸ್ ಹ್ಯಾಂಡಲ್ ಕೂಡ ಅದನ್ನು ಹೆಮ್ಮೆಯಿಂದ ಹಂಚಿಕೊಂಡಿದೆ. ಇದು ಯಾವುದೇ ವಿಭಜಕ ಸಿದ್ಧಾಂತವಲ್ಲ, ಪ್ರತಿಯೊಬ್ಬ ನಾಗರಿಕರಿಗೂ ಸೇರಿದ ರಾಷ್ಟ್ರೀಯ ಸಂಸ್ಥೆಯಾದ ಭಾರತೀಯ ರೈಲ್ವೆಯ ಸ್ಪಷ್ಟ ದುರುಪಯೋಗವಾಗಿದೆ” ಎಂದು ಕೆ.ಸಿ ವೇಣುಗೋಪಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್, “ನೀವು (ಪಿಣರಾಯಿ ವಿಜಯನ್‌) ಸ್ಪಷ್ಟವಾಗಿ ಖಂಡಿಸುತ್ತಿರುವುದು ಯಾವುದನ್ನು? ಮಕ್ಕಳು ತಾವು ಇಷ್ಟಪಟ್ಟ ಹಾಡು ಹಾಡಿರುವುದನ್ನಾ? ಅವರು ತಮ್ಮ ಮಾತೃಭೂಮಿಯ ಬಗ್ಗೆ ದೇಶಭಕ್ತಿ ಗೀತೆ ಹಾಡಿರುವುದನ್ನಾ?” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಯೊಬ್ಬರು ಮಕ್ಕಳ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಇಷ್ಟೊಂದು ಅಗೌರವಿಸುವುದು ಹೇಗೆ?” ಎಂದು ಕೇಳಿದ್ದಾರೆ.

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...