Homeಮುಖಪುಟತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

- Advertisement -
- Advertisement -

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ.

ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ ಅಂಶ (ಐಕ್ಯೂ) ಮತ್ತು ಭಾವನಾತ್ಮಕ ಅಂಶ (ಇಕ್ಯೂ) ನಡುವಿನ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ. ಭೋಪಾಲ್‌ನಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳಿನಿಂದ ಯುವ ವಿದ್ಯಾರ್ಥಿಯೊಬ್ಬ ಕೊಲ್ಲಲ್ಪಟ್ಟಿರುವಾಗ, ಭಗವದ್ಗೀತೆಯ ಅಧ್ಯಾಯಗಳನ್ನು ಓದುವುದು ಹೊಸದಾಗಿ ನೇಮಕಗೊಂಡ ಪೊಲೀಸರ ಜೀವನದ ಮೇಲೆ ಖಂಡಿತವಾಗಿಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಡಿಜಿ (ತರಬೇತಿ) ಶುಕ್ರವಾರ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವಿವರಿಸಿದೆ.

“ಗುರುವಾರದಿಂದ ಪ್ರಾರಂಭವಾದ ಮಾರ್ಗಶಿರ ಮಾಸವು ಶಾಸ್ತ್ರಗಳ ಪ್ರಕಾರ ಶ್ರೀಕೃಷ್ಣನ ಮಾಸ. ಅವರೇ ಶ್ರೀಮದ್ ಭಗವದ್ಗೀತೆಯಲ್ಲಿ ‘ಮಾಸಾನಂ ಮಾರ್ಗಶೀರ್ಷೋಹಂ’ ಅಂದರೆ ತಿಂಗಳುಗಳಲ್ಲಿ ನಾನು ಮಾರ್ಗಶೀರ್ಷ ಎಂದು ಹೇಳುತ್ತಾರೆ. ಪವಿತ್ರ ಮಾರ್ಗಶಿರ ಮಾಸದುದ್ದಕ್ಕೂ ರಾತ್ರಿ ಧ್ಯಾನಕ್ಕೆ ಮುಂಚಿತವಾಗಿ ಸಾಧ್ಯವಾದರೆ ಶ್ರೀಮದ್ ಭಗವದ್ಗೀತೆಯ ಒಂದು ಅಧ್ಯಾಯವನ್ನು ಓದಲು ಎಲ್ಲಾ ಪೊಲೀಸ್ ತರಬೇತಿ ಶಾಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಲಾಗಿದೆ. ಭಗವದ್ಗೀತೆಯನ್ನು ಓದುವುದರಿಂದ ನೇಮಕಾತಿ ಹೊಂದಿದವರಿಗೆ ಸ್ವತಂತ್ರ ಜೀವನವನ್ನು ನಡೆಸುವ ಕಲೆಯನ್ನು ಕಲಿಯಲು ಸಹಾಯವಾಗುತ್ತದೆ” ಎಂದು ಎಡಿಜಿ ಹೇಳಿದ್ದಾರೆ” ಎಂದಿದೆ.

ಗಮನಾರ್ಹವಾಗಿ, ತರಬೇತಿಯಲ್ಲಿ ಪೊಲೀಸರಿಗೆ ಗೋಸ್ವಾಮಿ ತುಳಸಿದಾಸರ ರಾಮಚರಿತಮಾನಸದ ಶ್ಲೋಕಗಳನ್ನು ಪಠಿಸುವಂತೆ ಪ್ರೋತ್ಸಾಹಿಸಿದ ನಾಲ್ಕು ತಿಂಗಳ ನಂತರ, ಭಗವದ್ಗೀತೆ ಪಾರಾಯಣದ ನಿರ್ದೇಶನ ನೀಡಲಾಗಿದೆ. ರಾಮಚರಿತಮಾನಸ ತರಬೇತಿ ನಿರತ ಪೊಲೀಸರಲ್ಲಿ ಶಿಸ್ತು ಮತ್ತು ನೈತಿಕ ಸ್ಪಷ್ಟತೆಯನ್ನು ತುಂಬುತ್ತದೆ ಎಂದು ಹೇಳಲಾಗಿತ್ತು.

ಮಧ್ಯಪ್ರದೇಶದ ವಿರೋಧ ಪಕ್ಷ ಕಾಂಗ್ರೆಸ್ ಹಿರಿಯ ಪೊಲೀಸ್ ಅಧಿಕಾರಿಯ ನಿರ್ದೇಶನವನ್ನು ಟೀಕಿಸಿದೆ. ಪೊಲೀಸ್ ಪಡೆಯನ್ನು “ಮೂಲಭೂತವಾಧೀಕರಣ ಮತ್ತು ಕೇಸರಿಕರಣ’ ಮಾಡುವ ಪ್ರಯತ್ನ ಎಂದಿದೆ.

“ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಧರ್ಮ ಮತ್ತು ನಂಬಿಕೆಯನ್ನು ಅನುಸರಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಎಡಿಜಿ (ತರಬೇತಿ) ನಿರ್ದೇಶಿಸಲ್ಪಟ್ಟಿರುವುದು ಮಧ್ಯಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ಮೂಲಭೂತಗೊಳಿಸುವ ಪ್ರಯತ್ನವಾಗಿದೆ. ಇದು ನಮ್ಮ ದೇಶದ ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಹೇಳಿದ್ದಾರೆ. ರಾಜ್ಯ ಪೊಲೀಸರ ತರಬೇತಿ ವಿಭಾಗದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷವು ಎಡಿಜಿ (ತರಬೇತಿ) ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅದನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದೆ.

“ಒಂದು ರಾಜಕೀಯ ಪಕ್ಷದ ಜನರು ಭಗವದ್ಗೀತೆಯನ್ನು ಕೋಮುವಾದ ಎಂದು ಕರೆಯುತ್ತಿರುವುದು ಆಘಾತಕಾರಿ. ಈ ಪ್ರಾಚೀನ ಪುಸ್ತಕವು ಧರ್ಮಕ್ಕಿಂತ ಜೀವನದ ತತ್ವಶಾಸ್ತ್ರದ ಬಗ್ಗೆ ಇರುವ ವಿಷಯಕ್ಕಾಗಿ ಪ್ರಪಂಚದಾದ್ಯಂತ ಜನರಿಂದ ಪೂಜಿಸಲ್ಪಟ್ಟಿದೆ. ಆದರೆ, ಕಾಂಗ್ರೆಸ್ ಅದನ್ನು ಕೋಮುವಾದೀಕರಿಸಲು ದೃಢನಿಶ್ಚಯವನ್ನು ಹೊಂದಿರುವಂತೆ ತೋರುತ್ತದೆ” ಎಂದು ಬಿಜೆಪಿ ಹೇಳಿದೆ.

ಎಡಿಜಿ (ತರಬೇತಿ) ರಾಜಾ ಬಾಬು ಸಿಂಗ್ ಅವರ ಭಗವದ್ಗೀತೆಗೆ ಸಂಬಂಧಿಸಿದ ನಿರ್ದೇಶನ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಗ್ವಾಲಿಯರ್ ಶ್ರೇಣಿಯ ಎಡಿಜಿಯಾಗಿ ನೇಮಕಗೊಂಡಾಗಲೂ ಕೂಡ ಅವರು ಜೈಲು ಕೈದಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ವಿತರಿಸಿದ್ದರು ಮತ್ತು ಅಂತಹುದೇ ಓದುವ ಅವಧಿಗಳನ್ನು ಪ್ರಾರಂಭಿಸಿದ್ದರು ಎಂದು ವರದಿಗಳು ವಿವರಿಸಿವೆ.

ಸಿಂಗ್ ಅವರು ಡಿಸೆಂಬರ್ 4 ರವರೆಗೆ ಪ್ರತಿದಿನ ಸಂಜೆ ಎಂಟು ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ತರಬೇತಿ ನಿರತ ಪೊಲೀಸರು ಪಠಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಡಿಸೆಂಬರ್ 21 ರ ವಿಶ್ವ ಧ್ಯಾನ ದಿನವನ್ನು ಗುರುತಿಸಲು, ಡಿಸೆಂಬರ್ 19 ಮತ್ತು 21 ರ ನಡುವೆ ಮೂರು ದಿನಗಳ ಕಾಲ ಹಾರ್ಟ್‌ಫುಲ್‌ನೆಸ್ ಧ್ಯಾನ ಅವಧಿಗಳನ್ನು ನಡೆಸಲು ಅವರು ಯೋಜಿಸಿದ್ದಾರೆ. ಅಪ್ಪರ್ ಲೇಕ್ (ಭೋಪಾಲ್), ರಾಜ್‌ವಾಡ (ಇಂದೋರ್), ಧುಂಧರ್ ಜಲಪಾತ (ಜಬಲ್‌ಪುರ), ಮಹಾಕಾಳೇಶ್ವರ ದೇವಸ್ಥಾನ (ಉಜ್ಜಯಿನಿ) ಮತ್ತು ಖಜುರಾಹೊ ದೇವಸ್ಥಾನಗಳು (ಛತ್ತರ್‌ಪುರ) ನಂತಹ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲಾ ನಾಗರಿಕರಿಗೆ ಮುಕ್ತವಾಗಿದ್ದು, 55 ಜಿಲ್ಲೆಗಳಾದ್ಯಂತ ಪೊಲೀಸ್ ಶ್ರೇಣಿಯ 76 ತರಬೇತಿ ಪಡೆದ ಹಾರ್ಟ್‌ಫುಲ್‌ನೆಸ್ ಬೋಧಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರಿಂದ ಇಲಾಖೆಗೆ ಯಾವುದೇ ವೆಚ್ಚವಿಲ್ಲ ಎಂದು ವರದಿಯಾಗಿದೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...