Homeಮುಖಪುಟತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

- Advertisement -
- Advertisement -

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ.

ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ ಅಂಶ (ಐಕ್ಯೂ) ಮತ್ತು ಭಾವನಾತ್ಮಕ ಅಂಶ (ಇಕ್ಯೂ) ನಡುವಿನ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ. ಭೋಪಾಲ್‌ನಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳಿನಿಂದ ಯುವ ವಿದ್ಯಾರ್ಥಿಯೊಬ್ಬ ಕೊಲ್ಲಲ್ಪಟ್ಟಿರುವಾಗ, ಭಗವದ್ಗೀತೆಯ ಅಧ್ಯಾಯಗಳನ್ನು ಓದುವುದು ಹೊಸದಾಗಿ ನೇಮಕಗೊಂಡ ಪೊಲೀಸರ ಜೀವನದ ಮೇಲೆ ಖಂಡಿತವಾಗಿಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಡಿಜಿ (ತರಬೇತಿ) ಶುಕ್ರವಾರ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವಿವರಿಸಿದೆ.

“ಗುರುವಾರದಿಂದ ಪ್ರಾರಂಭವಾದ ಮಾರ್ಗಶಿರ ಮಾಸವು ಶಾಸ್ತ್ರಗಳ ಪ್ರಕಾರ ಶ್ರೀಕೃಷ್ಣನ ಮಾಸ. ಅವರೇ ಶ್ರೀಮದ್ ಭಗವದ್ಗೀತೆಯಲ್ಲಿ ‘ಮಾಸಾನಂ ಮಾರ್ಗಶೀರ್ಷೋಹಂ’ ಅಂದರೆ ತಿಂಗಳುಗಳಲ್ಲಿ ನಾನು ಮಾರ್ಗಶೀರ್ಷ ಎಂದು ಹೇಳುತ್ತಾರೆ. ಪವಿತ್ರ ಮಾರ್ಗಶಿರ ಮಾಸದುದ್ದಕ್ಕೂ ರಾತ್ರಿ ಧ್ಯಾನಕ್ಕೆ ಮುಂಚಿತವಾಗಿ ಸಾಧ್ಯವಾದರೆ ಶ್ರೀಮದ್ ಭಗವದ್ಗೀತೆಯ ಒಂದು ಅಧ್ಯಾಯವನ್ನು ಓದಲು ಎಲ್ಲಾ ಪೊಲೀಸ್ ತರಬೇತಿ ಶಾಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಲಾಗಿದೆ. ಭಗವದ್ಗೀತೆಯನ್ನು ಓದುವುದರಿಂದ ನೇಮಕಾತಿ ಹೊಂದಿದವರಿಗೆ ಸ್ವತಂತ್ರ ಜೀವನವನ್ನು ನಡೆಸುವ ಕಲೆಯನ್ನು ಕಲಿಯಲು ಸಹಾಯವಾಗುತ್ತದೆ” ಎಂದು ಎಡಿಜಿ ಹೇಳಿದ್ದಾರೆ” ಎಂದಿದೆ.

ಗಮನಾರ್ಹವಾಗಿ, ತರಬೇತಿಯಲ್ಲಿ ಪೊಲೀಸರಿಗೆ ಗೋಸ್ವಾಮಿ ತುಳಸಿದಾಸರ ರಾಮಚರಿತಮಾನಸದ ಶ್ಲೋಕಗಳನ್ನು ಪಠಿಸುವಂತೆ ಪ್ರೋತ್ಸಾಹಿಸಿದ ನಾಲ್ಕು ತಿಂಗಳ ನಂತರ, ಭಗವದ್ಗೀತೆ ಪಾರಾಯಣದ ನಿರ್ದೇಶನ ನೀಡಲಾಗಿದೆ. ರಾಮಚರಿತಮಾನಸ ತರಬೇತಿ ನಿರತ ಪೊಲೀಸರಲ್ಲಿ ಶಿಸ್ತು ಮತ್ತು ನೈತಿಕ ಸ್ಪಷ್ಟತೆಯನ್ನು ತುಂಬುತ್ತದೆ ಎಂದು ಹೇಳಲಾಗಿತ್ತು.

ಮಧ್ಯಪ್ರದೇಶದ ವಿರೋಧ ಪಕ್ಷ ಕಾಂಗ್ರೆಸ್ ಹಿರಿಯ ಪೊಲೀಸ್ ಅಧಿಕಾರಿಯ ನಿರ್ದೇಶನವನ್ನು ಟೀಕಿಸಿದೆ. ಪೊಲೀಸ್ ಪಡೆಯನ್ನು “ಮೂಲಭೂತವಾಧೀಕರಣ ಮತ್ತು ಕೇಸರಿಕರಣ’ ಮಾಡುವ ಪ್ರಯತ್ನ ಎಂದಿದೆ.

“ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಧರ್ಮ ಮತ್ತು ನಂಬಿಕೆಯನ್ನು ಅನುಸರಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಎಡಿಜಿ (ತರಬೇತಿ) ನಿರ್ದೇಶಿಸಲ್ಪಟ್ಟಿರುವುದು ಮಧ್ಯಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ಮೂಲಭೂತಗೊಳಿಸುವ ಪ್ರಯತ್ನವಾಗಿದೆ. ಇದು ನಮ್ಮ ದೇಶದ ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಹೇಳಿದ್ದಾರೆ. ರಾಜ್ಯ ಪೊಲೀಸರ ತರಬೇತಿ ವಿಭಾಗದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷವು ಎಡಿಜಿ (ತರಬೇತಿ) ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅದನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದೆ.

“ಒಂದು ರಾಜಕೀಯ ಪಕ್ಷದ ಜನರು ಭಗವದ್ಗೀತೆಯನ್ನು ಕೋಮುವಾದ ಎಂದು ಕರೆಯುತ್ತಿರುವುದು ಆಘಾತಕಾರಿ. ಈ ಪ್ರಾಚೀನ ಪುಸ್ತಕವು ಧರ್ಮಕ್ಕಿಂತ ಜೀವನದ ತತ್ವಶಾಸ್ತ್ರದ ಬಗ್ಗೆ ಇರುವ ವಿಷಯಕ್ಕಾಗಿ ಪ್ರಪಂಚದಾದ್ಯಂತ ಜನರಿಂದ ಪೂಜಿಸಲ್ಪಟ್ಟಿದೆ. ಆದರೆ, ಕಾಂಗ್ರೆಸ್ ಅದನ್ನು ಕೋಮುವಾದೀಕರಿಸಲು ದೃಢನಿಶ್ಚಯವನ್ನು ಹೊಂದಿರುವಂತೆ ತೋರುತ್ತದೆ” ಎಂದು ಬಿಜೆಪಿ ಹೇಳಿದೆ.

ಎಡಿಜಿ (ತರಬೇತಿ) ರಾಜಾ ಬಾಬು ಸಿಂಗ್ ಅವರ ಭಗವದ್ಗೀತೆಗೆ ಸಂಬಂಧಿಸಿದ ನಿರ್ದೇಶನ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಗ್ವಾಲಿಯರ್ ಶ್ರೇಣಿಯ ಎಡಿಜಿಯಾಗಿ ನೇಮಕಗೊಂಡಾಗಲೂ ಕೂಡ ಅವರು ಜೈಲು ಕೈದಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ವಿತರಿಸಿದ್ದರು ಮತ್ತು ಅಂತಹುದೇ ಓದುವ ಅವಧಿಗಳನ್ನು ಪ್ರಾರಂಭಿಸಿದ್ದರು ಎಂದು ವರದಿಗಳು ವಿವರಿಸಿವೆ.

ಸಿಂಗ್ ಅವರು ಡಿಸೆಂಬರ್ 4 ರವರೆಗೆ ಪ್ರತಿದಿನ ಸಂಜೆ ಎಂಟು ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ತರಬೇತಿ ನಿರತ ಪೊಲೀಸರು ಪಠಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಡಿಸೆಂಬರ್ 21 ರ ವಿಶ್ವ ಧ್ಯಾನ ದಿನವನ್ನು ಗುರುತಿಸಲು, ಡಿಸೆಂಬರ್ 19 ಮತ್ತು 21 ರ ನಡುವೆ ಮೂರು ದಿನಗಳ ಕಾಲ ಹಾರ್ಟ್‌ಫುಲ್‌ನೆಸ್ ಧ್ಯಾನ ಅವಧಿಗಳನ್ನು ನಡೆಸಲು ಅವರು ಯೋಜಿಸಿದ್ದಾರೆ. ಅಪ್ಪರ್ ಲೇಕ್ (ಭೋಪಾಲ್), ರಾಜ್‌ವಾಡ (ಇಂದೋರ್), ಧುಂಧರ್ ಜಲಪಾತ (ಜಬಲ್‌ಪುರ), ಮಹಾಕಾಳೇಶ್ವರ ದೇವಸ್ಥಾನ (ಉಜ್ಜಯಿನಿ) ಮತ್ತು ಖಜುರಾಹೊ ದೇವಸ್ಥಾನಗಳು (ಛತ್ತರ್‌ಪುರ) ನಂತಹ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲಾ ನಾಗರಿಕರಿಗೆ ಮುಕ್ತವಾಗಿದ್ದು, 55 ಜಿಲ್ಲೆಗಳಾದ್ಯಂತ ಪೊಲೀಸ್ ಶ್ರೇಣಿಯ 76 ತರಬೇತಿ ಪಡೆದ ಹಾರ್ಟ್‌ಫುಲ್‌ನೆಸ್ ಬೋಧಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರಿಂದ ಇಲಾಖೆಗೆ ಯಾವುದೇ ವೆಚ್ಚವಿಲ್ಲ ಎಂದು ವರದಿಯಾಗಿದೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...