Homeಮುಖಪುಟತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

- Advertisement -
- Advertisement -

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ.

ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ ಅಂಶ (ಐಕ್ಯೂ) ಮತ್ತು ಭಾವನಾತ್ಮಕ ಅಂಶ (ಇಕ್ಯೂ) ನಡುವಿನ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ. ಭೋಪಾಲ್‌ನಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗಳಿನಿಂದ ಯುವ ವಿದ್ಯಾರ್ಥಿಯೊಬ್ಬ ಕೊಲ್ಲಲ್ಪಟ್ಟಿರುವಾಗ, ಭಗವದ್ಗೀತೆಯ ಅಧ್ಯಾಯಗಳನ್ನು ಓದುವುದು ಹೊಸದಾಗಿ ನೇಮಕಗೊಂಡ ಪೊಲೀಸರ ಜೀವನದ ಮೇಲೆ ಖಂಡಿತವಾಗಿಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಡಿಜಿ (ತರಬೇತಿ) ಶುಕ್ರವಾರ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವಿವರಿಸಿದೆ.

“ಗುರುವಾರದಿಂದ ಪ್ರಾರಂಭವಾದ ಮಾರ್ಗಶಿರ ಮಾಸವು ಶಾಸ್ತ್ರಗಳ ಪ್ರಕಾರ ಶ್ರೀಕೃಷ್ಣನ ಮಾಸ. ಅವರೇ ಶ್ರೀಮದ್ ಭಗವದ್ಗೀತೆಯಲ್ಲಿ ‘ಮಾಸಾನಂ ಮಾರ್ಗಶೀರ್ಷೋಹಂ’ ಅಂದರೆ ತಿಂಗಳುಗಳಲ್ಲಿ ನಾನು ಮಾರ್ಗಶೀರ್ಷ ಎಂದು ಹೇಳುತ್ತಾರೆ. ಪವಿತ್ರ ಮಾರ್ಗಶಿರ ಮಾಸದುದ್ದಕ್ಕೂ ರಾತ್ರಿ ಧ್ಯಾನಕ್ಕೆ ಮುಂಚಿತವಾಗಿ ಸಾಧ್ಯವಾದರೆ ಶ್ರೀಮದ್ ಭಗವದ್ಗೀತೆಯ ಒಂದು ಅಧ್ಯಾಯವನ್ನು ಓದಲು ಎಲ್ಲಾ ಪೊಲೀಸ್ ತರಬೇತಿ ಶಾಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಲಾಗಿದೆ. ಭಗವದ್ಗೀತೆಯನ್ನು ಓದುವುದರಿಂದ ನೇಮಕಾತಿ ಹೊಂದಿದವರಿಗೆ ಸ್ವತಂತ್ರ ಜೀವನವನ್ನು ನಡೆಸುವ ಕಲೆಯನ್ನು ಕಲಿಯಲು ಸಹಾಯವಾಗುತ್ತದೆ” ಎಂದು ಎಡಿಜಿ ಹೇಳಿದ್ದಾರೆ” ಎಂದಿದೆ.

ಗಮನಾರ್ಹವಾಗಿ, ತರಬೇತಿಯಲ್ಲಿ ಪೊಲೀಸರಿಗೆ ಗೋಸ್ವಾಮಿ ತುಳಸಿದಾಸರ ರಾಮಚರಿತಮಾನಸದ ಶ್ಲೋಕಗಳನ್ನು ಪಠಿಸುವಂತೆ ಪ್ರೋತ್ಸಾಹಿಸಿದ ನಾಲ್ಕು ತಿಂಗಳ ನಂತರ, ಭಗವದ್ಗೀತೆ ಪಾರಾಯಣದ ನಿರ್ದೇಶನ ನೀಡಲಾಗಿದೆ. ರಾಮಚರಿತಮಾನಸ ತರಬೇತಿ ನಿರತ ಪೊಲೀಸರಲ್ಲಿ ಶಿಸ್ತು ಮತ್ತು ನೈತಿಕ ಸ್ಪಷ್ಟತೆಯನ್ನು ತುಂಬುತ್ತದೆ ಎಂದು ಹೇಳಲಾಗಿತ್ತು.

ಮಧ್ಯಪ್ರದೇಶದ ವಿರೋಧ ಪಕ್ಷ ಕಾಂಗ್ರೆಸ್ ಹಿರಿಯ ಪೊಲೀಸ್ ಅಧಿಕಾರಿಯ ನಿರ್ದೇಶನವನ್ನು ಟೀಕಿಸಿದೆ. ಪೊಲೀಸ್ ಪಡೆಯನ್ನು “ಮೂಲಭೂತವಾಧೀಕರಣ ಮತ್ತು ಕೇಸರಿಕರಣ’ ಮಾಡುವ ಪ್ರಯತ್ನ ಎಂದಿದೆ.

“ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಧರ್ಮ ಮತ್ತು ನಂಬಿಕೆಯನ್ನು ಅನುಸರಿಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಎಡಿಜಿ (ತರಬೇತಿ) ನಿರ್ದೇಶಿಸಲ್ಪಟ್ಟಿರುವುದು ಮಧ್ಯಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ಮೂಲಭೂತಗೊಳಿಸುವ ಪ್ರಯತ್ನವಾಗಿದೆ. ಇದು ನಮ್ಮ ದೇಶದ ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಹೇಳಿದ್ದಾರೆ. ರಾಜ್ಯ ಪೊಲೀಸರ ತರಬೇತಿ ವಿಭಾಗದ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷವು ಎಡಿಜಿ (ತರಬೇತಿ) ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅದನ್ನು ವಿರೋಧಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದೆ.

“ಒಂದು ರಾಜಕೀಯ ಪಕ್ಷದ ಜನರು ಭಗವದ್ಗೀತೆಯನ್ನು ಕೋಮುವಾದ ಎಂದು ಕರೆಯುತ್ತಿರುವುದು ಆಘಾತಕಾರಿ. ಈ ಪ್ರಾಚೀನ ಪುಸ್ತಕವು ಧರ್ಮಕ್ಕಿಂತ ಜೀವನದ ತತ್ವಶಾಸ್ತ್ರದ ಬಗ್ಗೆ ಇರುವ ವಿಷಯಕ್ಕಾಗಿ ಪ್ರಪಂಚದಾದ್ಯಂತ ಜನರಿಂದ ಪೂಜಿಸಲ್ಪಟ್ಟಿದೆ. ಆದರೆ, ಕಾಂಗ್ರೆಸ್ ಅದನ್ನು ಕೋಮುವಾದೀಕರಿಸಲು ದೃಢನಿಶ್ಚಯವನ್ನು ಹೊಂದಿರುವಂತೆ ತೋರುತ್ತದೆ” ಎಂದು ಬಿಜೆಪಿ ಹೇಳಿದೆ.

ಎಡಿಜಿ (ತರಬೇತಿ) ರಾಜಾ ಬಾಬು ಸಿಂಗ್ ಅವರ ಭಗವದ್ಗೀತೆಗೆ ಸಂಬಂಧಿಸಿದ ನಿರ್ದೇಶನ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಗ್ವಾಲಿಯರ್ ಶ್ರೇಣಿಯ ಎಡಿಜಿಯಾಗಿ ನೇಮಕಗೊಂಡಾಗಲೂ ಕೂಡ ಅವರು ಜೈಲು ಕೈದಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ವಿತರಿಸಿದ್ದರು ಮತ್ತು ಅಂತಹುದೇ ಓದುವ ಅವಧಿಗಳನ್ನು ಪ್ರಾರಂಭಿಸಿದ್ದರು ಎಂದು ವರದಿಗಳು ವಿವರಿಸಿವೆ.

ಸಿಂಗ್ ಅವರು ಡಿಸೆಂಬರ್ 4 ರವರೆಗೆ ಪ್ರತಿದಿನ ಸಂಜೆ ಎಂಟು ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ತರಬೇತಿ ನಿರತ ಪೊಲೀಸರು ಪಠಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಡಿಸೆಂಬರ್ 21 ರ ವಿಶ್ವ ಧ್ಯಾನ ದಿನವನ್ನು ಗುರುತಿಸಲು, ಡಿಸೆಂಬರ್ 19 ಮತ್ತು 21 ರ ನಡುವೆ ಮೂರು ದಿನಗಳ ಕಾಲ ಹಾರ್ಟ್‌ಫುಲ್‌ನೆಸ್ ಧ್ಯಾನ ಅವಧಿಗಳನ್ನು ನಡೆಸಲು ಅವರು ಯೋಜಿಸಿದ್ದಾರೆ. ಅಪ್ಪರ್ ಲೇಕ್ (ಭೋಪಾಲ್), ರಾಜ್‌ವಾಡ (ಇಂದೋರ್), ಧುಂಧರ್ ಜಲಪಾತ (ಜಬಲ್‌ಪುರ), ಮಹಾಕಾಳೇಶ್ವರ ದೇವಸ್ಥಾನ (ಉಜ್ಜಯಿನಿ) ಮತ್ತು ಖಜುರಾಹೊ ದೇವಸ್ಥಾನಗಳು (ಛತ್ತರ್‌ಪುರ) ನಂತಹ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲಾ ನಾಗರಿಕರಿಗೆ ಮುಕ್ತವಾಗಿದ್ದು, 55 ಜಿಲ್ಲೆಗಳಾದ್ಯಂತ ಪೊಲೀಸ್ ಶ್ರೇಣಿಯ 76 ತರಬೇತಿ ಪಡೆದ ಹಾರ್ಟ್‌ಫುಲ್‌ನೆಸ್ ಬೋಧಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರಿಂದ ಇಲಾಖೆಗೆ ಯಾವುದೇ ವೆಚ್ಚವಿಲ್ಲ ಎಂದು ವರದಿಯಾಗಿದೆ.

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...