Homeದಲಿತ್ ಫೈಲ್ಸ್ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಂಸ್ಕೃತ ವಿಭಾಗದ ಡೀನ್ ಡಾ. ಸಿ.ಎನ್ ವಿಜಯಕುಮಾರಿ ವಿರುದ್ಧ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ದಲಿತ ಸಮುದಾಯದ ವಿಪಿನ್ ವಿಜಯನ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಡೀನ್ ವಿಜಯಕುಮಾರಿ ಜಾತಿವಾದಿ ಹೇಳಿಕೆ ನೀಡಿದ್ದಾರೆ. ಅಂತಿಮ ಹಂತದಲ್ಲಿ ಜಾತಿಯ ಕಾರಣಕ್ಕೆ ತನ್ನ ಪಿಎಚ್‌ಡಿಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದ್ದಾರೆ.

“ನೀವು ಕೆಳ ಜಾತಿಯವರು ಸಂಸ್ಕೃತ ಅಧ್ಯಯನ ಮಾಡಬಾರದು. ಕೆಳಜಾತಿಯ ವಿದ್ಯಾರ್ಥಿಗಳ ಪ್ರವೇಶದಿಂದಾಗಿ ವಿಭಾಗದ ಪಾವಿತ್ರ್ಯತೆ ಹಾಳಾಗಿದೆ” ಎಂದು ಡೀನ್ ವಿಜಯಕುಮಾರಿ ಹೇಳಿದ್ದಾಗಿ ವಿಪಿನ್‌ ಆರೋಪಿಸಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ಕಝಕೂಟಂ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ವಿಪಿನ್ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಬಿಎ ಮತ್ತು ಎಂಎ ಪದವಿಗಳನ್ನು ಪೂರ್ಣಗೊಳಿಸಿ, ನಂತರ ಕೇರಳ ವಿಶ್ವವಿದ್ಯಾಲಯದಿಂದ ಬಿಎಡ್ ಮತ್ತು ಎಂಎಡ್‌ ಪದವಿಗಳನ್ನು ಪಡೆದಿದ್ದಾರೆ.

ತನ್ನ ವಿರುದ್ದದ ಆರೋಪಗಳ ಬಗ್ಗೆ ವಿಜಯಕುಮಾರಿ ಪ್ರತಿಕ್ರಿಯೆ ನೀಡಿದ್ದು, ವಿಪಿನ್ ಅವರ ಪಿಎಚ್‌ಡಿ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಿಲ್ಲ. ಅವರು ಸಂಸ್ಕೃತ, ಇಂಗ್ಲಿಷ್ ಅಥವಾ ಮಲಯಾಳಂ ಭಾಷೆಗಳಲ್ಲಿನ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾಗಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ, ವಿಪಿನ್ ಅವರ ಪ್ರಬಂಧವು ಸರಿಯಾದ ಸಂಶೋಧನಾ ವಿಧಾನವನ್ನು ಹೊಂದಿಲ್ಲ ಎಂದಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ವಿಪಿನ್, ವಿಜಯಕುಮಾರಿ ಅವರ ಮಾರ್ಗದರ್ಶನದಲ್ಲಿ ನಾನು ಸಂಸ್ಕೃತದಲ್ಲಿ ಎಂಫಿಲ್ ಪೂರ್ಣಗೊಳಿಸಿದ್ದೇನೆ. ನನಗೆ ಸಂಸ್ಕೃತ ಗೊತ್ತಿಲ್ಲದಿದ್ದರೆ, ಅವರು ಯಾವ ಆಧಾರದ ಮೇಲೆ ನನಗೆ ಮಾರ್ಗದರ್ಶನ ನೀಡಿದ್ದರು ಮತ್ತು ನನ್ನ ಎಂಫಿಲ್ ಪದವಿಯನ್ನು ಅನುಮೋದಿಸಿದ್ದರು ಎಂದು ಪ್ರಶ್ನಿಸಿದ್ದಾರೆ. ಇದು ವೈಯಕ್ತಿಕ ತಾರತಮ್ಯ ಮತ್ತು ನನ್ನ ಶೈಕ್ಷಣಿಕ ವೃತ್ತಿಜೀವನವನ್ನು ಹಾಳುಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಎರಡಕ್ಕೂ ಅಪಖ್ಯಾತಿ ತಂದಿದೆ. ತನ್ನನ್ನು ಅನಗತ್ಯ ವಿವಾದಕ್ಕೆ ಎಳೆದಿದೆ ಎಂದು ಸಚಿವೆ ಬಿಂದು ಹೇಳಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಉಪಕುಲಪತಿ ಮತ್ತು ಕುಲಸಚಿವರಿಗೆ ನಿರ್ದೇಶನ ನೀಡಿದ್ದಾರೆ.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...