Homeಮುಖಪುಟಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

- Advertisement -
- Advertisement -

ಬಹುಪತ್ನಿತ್ವ ನಿಷೇಧಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ನ.9) ಹೇಳಿದ್ದಾರೆ. ಮಸೂದೆಯಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಸ್ತಾಪಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ನವೆಂಬರ್ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಕರಡು ಶಾಸನವು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ವಿನಾಯಿತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಬರುವ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ, ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ ಮತ್ತು ದಿಮಾ ಹಸಾವೊ ಸ್ವಾಯತ್ತ ಮಂಡಳಿಯ ಪ್ರದೇಶಗಳಿಗೆ ಹೊಸ ಕಾನೂನು ಸದ್ಯಕ್ಕೆ ಅನ್ವಯಿಸುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಅಸ್ಸಾಂನ ಮೂವತ್ತೈದು ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳು ಮೇಲೆ ಉಲ್ಲೇಖಿಸಿರುವ ಮೂರು ಮಂಡಳಿಗಳ ಭಾಗವಾಗಿವೆ. ಸಂವಿಧಾನದ ಆರನೇ ಪರಿಚ್ಛೇದ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ನಾಗರಿಕರಿಗೆ ಭೂಮಿಯ ರಕ್ಷಣೆ ಮತ್ತು ನಾಮಮಾತ್ರದ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ.

ಹೊಸ ಕಾನೂನು ರಾಜ್ಯದ ಎಲ್ಲರಿಗೂ (ಸರ್ವ ವರ್ಗದವರಿಗೂ) ಅನ್ವಯಿಸುತ್ತದೆ. 2005ಕ್ಕಿಂತ ಮೊದಲು ಆರನೇ ಪರಿಚ್ಛೇದದಡಿ ಬರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರಿಗೆ ವಿನಾಯಿತಿದೆ ಸಿಎಂ ಹೇಳಿದ್ದಾರೆ.

ಬಹುಪತ್ನಿತ್ವದ ಬಲಿಪಶುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವು ನಿಧಿಯನ್ನು ಕೂಡ ರಚಿಸಲಿದೆ. ಯಾವುದೇ ಮಹಿಳೆ ತನ್ನ ಜೀವನದಲ್ಲಿ ಕಷ್ಟಗಳನ್ನು ಎದುರಿಸದಂತೆ ಅಗತ್ಯವಿರುವ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ಸಹಾಯವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಪತ್ನಿತ್ವ ನಿಷೇಧ ಕಾನೂನು ಜಾರಿಗೆ ತರುವುದಾಗಿ ಸಿಎಂ ಶರ್ಮಾ ಬಹಳ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದರು. ಇದು ರಾಜ್ಯ ಎಲ್ಲಾ ವರ್ಗದವರಿಗೂ ಅನ್ವಯಿಸುತ್ತದೆ ಎಂದರೂ, ಮುಸ್ಲಿಮರನ್ನು ಗುರಿಯಾಗಿಸಿ ಕಾನೂನು ರೂಪಿಸಲಾಗುತ್ತಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಏಕೆಂದರೆ, ಬಹುಪತ್ನಿತ್ವ ನಿಷೇಧದ ಉದ್ದೇಶವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಸಬಲೀಕರಣವಾಗಿದೆ ಎಂದು ಶರ್ಮಾ ಈಗಾಗಲೇ ಹೇಳಿದ್ದಾರೆ.

ಕೆಲ ಸಮುದಾಯ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಮಹಿಳೆಯರು ಸರ್ಕಾರದ ಹೊಸ ಕಾನೂನನ್ನು ಸ್ವಾಗತಿಸಿದರೂ, ಒಂದು ಸಮುದಾಯವನ್ನು ಅಪರಾಧೀಕರಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ. 1950ರ ದಶಕದಲ್ಲಿ ಹಿಂದೂ ಸಂಹಿತೆ ಮಸೂದೆಯ ಮೂಲಕ ಹಿಂದೂಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಯಿತು. ಈ ಹಿಂದೂ ಸಂಹಿತೆ ಮಸೂದೆ ಹಿಂದೂ ಧರ್ಮದ ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ವಿಷಯಗಳನ್ನು ನಿಯಂತ್ರಿಸುತ್ತದೆ.

ಬಹುಪತ್ನಿತ್ವವನ್ನು ಅಪರಾಧೀಕರಿಸುವ ಒತ್ತಾಯವನ್ನು ಹಿಂದುತ್ವ ಸಂಘಟನೆಗಳು ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಸಮರ್ಥನೆಯಾಗಿ ಬಳಸುತ್ತಿವೆ.

ಏಕರೂಪ ನಾಗರಿಕ ಸಂಹಿತೆಯು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೆ ಒಂದೇ ಕಾನೂನನ್ನು ಅನ್ವಯಿಸಲಿದೆ. ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ತಮ್ಮ ವೈಯಕ್ತಿಕ ವಿಷಯಗಳಿಗೆ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಈ ಕಾನೂನುಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ.

ಏಕರೂಪ ನಾಗರಿಕ ಸಂಹಿತೆ ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಲ್ಲಿ ಬಹಳ ಹಿಂದಿನಿಂದಲೂ ಇದ್ದು, ಹಿಂದುತ್ವ ಪಕ್ಷ ಆಳುವ ಹಲವಾರು ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿದೆ.

ಜನವರಿಯಲ್ಲಿ, ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಾತಂತ್ರ್ಯದ ನಂತರ ಈ ಕಾನೂನು ಜಾರಿ ಮಾಡಿದ ಮಾಡಿದ ಮೊದಲ ರಾಜ್ಯ ಎಂದೆನೆಸಿಕೊಂಡಿದೆ. 1867ರಲ್ಲಿ ಪೋರ್ಚುಗೀಸರು ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಿದರು. ಅದು ಈಗಲೂ ಜಾರಿಯಲ್ಲಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಾಗ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿಂ ಪುರುಷರಿಗೆ ಬಹುಪತ್ನಿತ್ವ, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮುಸ್ಲಿಂ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ವಾದಿಸಿತ್ತು.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದೆ. ಇದು ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...