Homeಮುಖಪುಟಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

ಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರ ಎಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ದಿಕ್ಕುತಪ್ಪಿಸಲು ಕೆಲವರು ಫೇಕ್‌ ನ್ಯೂಸ್‌ಗಳ ಮೊರೆ ಹೋಗಿದ್ದಾರೆ. ಅಂತಹ ಕೆಲವು ಫೇಕ್‌ನ್ಯೂಸ್‌ಗಳನ್ನು ಇಲ್ಲಿ ಕೊಡಲಾಗಿದೆ.

1 ನಾವು ಮುಸ್ಲಿಮರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುತ್ತೇವೆ.

ದೇಶಾದ್ಯಂತ ಭಾರೀ ಹೋರಾಟಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಮುಸ್ಲಿಂರಾದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನೂರಾರು ಜನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾಯ್ದೆಯು ಮುಸ್ಲಿಮರನ್ನು ಹೊರತುಪಡಿಸಿ ಇತರೆ ಧರ್ಮಿಯರು 2015ಕ್ಕೂ ಮುಂಚೆ ಭಾರತಕ್ಕೆ ವಲಸೆ ಬಂದಿದ್ದರೆ ಅವರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.

ಈ ಕುರಿತು ನಿಜಕ್ಕೂ ಅವರು ಮುಸ್ಲಿಮರೆ ಎಂದು ಫ್ಯಾಕ್ಟ್ಚೆಕ್ ಮಾಡಿದಾಗ ಆಘಾತಕಾರಿ ಅಂಶಗಳು ಬಯಲಾಗಿವೆ. ಈಗ ಯಾರೆಲ್ಲಾ ತಾವು ಮುಸ್ಲಿಮರು ಎನ್ನುತ್ತಿದ್ದಾರೆ ಅದೇ ಅಕೌಂಟ್‌ಗಳು ಕೆಲವು ತಿಂಗಳುಗಳ ಹಿಂದೆಯಷ್ಟೇ ನಾವು ಹಿಂದೂಗಳು. ಹಿಂದೂಗಳಾಗಿದ್ದಕ್ಕೆ ಹೆಮ್ಮೆ ಇದೆ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಅಂದರೆ ಹಿಂದೂಗಳಾಗಿದ್ದರೂ ಸಹ ಮುಸ್ಲಿಂ ಹೆಸರಿಗೆ ಬದಲಿಸಿಕೊಂಡು ಅಥವಾ ಫೇಕ್ ಐಡಿಗಳನ್ನು ಬಳಸಿಕೊಂಡು ಪೌರತ್ವ ಕಾಯ್ದೆಯನ್ನು ಬೆಂಬಲಿಸಲು ಮುಂದಾಗಿದ್ದಾರೆ. ಅರ್ಥಾತ್ ಮುಸ್ಲಿಂ ವಿರುದ್ಧದ ಕಾನೂನನ್ನು ಮುಸ್ಲಿಮರೆ ಬೆಂಬಲಿಸುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಕಿಡಿಗೇಡಿಗಳು ಮುಂದಾಗಿದ್ದಾರೆ.

2 ಟಿಎಂಸಿ ಮುಖಂಡ, ಕೋಲ್ಕತ್ತದ ಮೇಯರ್ ಕೂಡ ಪೌರತ್ವ ಕಾಯ್ದೆಯನ್ನು ಬೆಂಬಲಿಸಿದ್ದಾರೆ?

ಸಿಎಬಿ ವಿರುದ್ಧ ದಂಗೆ ಎದ್ದಿರುವವರೆ ಕೇಳಿ. ಅಕಸ್ಮಾತ್ 70% ಇರುವ ಹಿಂದೂಗಳೇನಾದರೂ ಅಮಿತ್ ಶಾ ಬೆಂಬಲಕ್ಕೆ ನಿಂತರೆ ನಾಳೆ ನೀವು ರಸ್ತೆಯಲ್ಲಿಯೂ ಸಹ ಓಡಾಡಲು ಆಗುವುದಿಲ್ಲ ಎಂದು ಫಿರ್ಹಾದ್ ಬಾಬಿ ಹಕೀಂ ಹೇಳಿದ್ದಾರೆ ಎಂಬ ಪೋಸ್ಟರ್ ಅನ್ನು ಢಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಷೇರ್ ಮಾಡಿದ್ದಾರೆ.

ಫಿರ್ಹಾದ್ ಬಾಬಿ ಹಕೀಂ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಟಿಎಂಸಿ ಪಕ್ಷದ ಕೋಲ್ಕತ್ತಾ ಮೇಯರ್. ಟಿಎಂಸಿ ಪಕ್ಷವೇ ಖಡಾಖಂಡಿತವಾಗಿ ಸಿಎಬಿ ವಿರೋಧಿಸಿರುತ್ತಿರುವಾಗ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್ ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ.

ನಿಜವೆಂದರೆ ಅವರ ಪೌರತ್ವ ಕಾಯ್ದೆ ವಿರೋಧಿಸಿ ತಮ್ಮ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ ಮಾತ್ರವಲ್ಲ ಟಿವಿ ಚರ್ಚೆ ಮತ್ತು ಸಿಎಬಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ. ಯಥಾಪ್ರಕಾರ ನೇರವಾಗಿ ಎದುರಿಸಲಾಗದ ಬಿಜೆಪಿ ಕಾರ್ಯಕರ್ತರು ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

5 ಅಲಿಘರ್ ವಿವಿಯ ವಿದ್ಯಾರ್ಥಿಗಳು ಹಿಂದೂಗಳಿಂದ ಸ್ವಾತಂತ್ರ ಬೇಕು ಎಂದು ಘೋಷಣೆ ಕೂಗಿದರೆ?

ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ನಿದ್ದೆಗೆಡಿಸಿವೆ. ಇನ್ನು ಎಲ್ಲಾ ವಿ.ವಿಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಾಮೀಯ ವಿವಿ ಮತ್ತು ಅಲಿಘರ್ ವಿವಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂತಹ ಸಂದರ್ಭದಲ್ಲಿ ಅಲಿಘರ್ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಹಿಂದೂಗಳಿಂದ ಸ್ವಾತಂತ್ರ್ಯ ಬೇಕು ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ಅಸಲಿ ವಿಡಿಯೋವನ್ನು ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಹಿಂದೂತ್ವದಿಂದ ಸ್ವಾತಂತ್ರ್ಯ ಬೇಕು ಎಂದು ಕೂಗಿದ್ದಾರೆ. ಆದರೆ ಹೇಡಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...