Homeದಲಿತ್ ಫೈಲ್ಸ್ಮಧ್ಯಪ್ರದೇಶ| 'ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗಿಲ್ಲ..'; ಎಂದು ದಲಿತ ಯುವಕನಿಗೆ ಚಾಕುವಿನಿಂದ ಇರಿದ...

ಮಧ್ಯಪ್ರದೇಶ| ‘ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗಿಲ್ಲ..’; ಎಂದು ದಲಿತ ಯುವಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

- Advertisement -
- Advertisement -

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರದ ಒಂದು ಆತಂಕಕಾರಿ ಪ್ರಕರಣ ವರದಿಯಾಗಿದ್ದು, ಇಬ್ಬರು ಸ್ನೇಹಿತರ ನಡುವೆ ಕುಡಿದು ನಡೆದ ಜಗಳ ಚಾಕುವಿನಿಂದ ಹಲ್ಲೆಗೆ ಇರಿದ ಹಂತಕ್ಕೆ ತಲುಪಿದೆ.

ಪೊಲೀಸರ ಪ್ರಕಾರ, ಮಹಾವೀರ್ ಕಾಲೋನಿಯ ನಿವಾಸಿಗಳಾದ ಬಲ್ವೀರ್ ವಾಲ್ಮೀಕಿ ಮತ್ತು ವಿಜಯ್ ಶರ್ಮಾ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ, ವಿಜಯ್ ಬಲವೀರ್‌ನನ್ನು ತಿಗ್ರಾ ರಸ್ತೆಯ ಬದನ್‌ಪುರ ಬಳಿ ಕುಡಿಯಲು ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದರು. ಆದರೆ, ಸಂಜೆಯಾಗುತ್ತಿದ್ದಂತೆ ಅವರ ನಡುವೆ ವಾಗ್ವಾದ ಭುಗಿಲೆದ್ದಿತು.

ಕೆರಳಿದ ವಿಜಯ್, “ನೀನು ಕೆಳಜಾತಿಗೆ ಸೇರಿದವನು; ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗೆ ಇಲ್ಲ” ಎಂದು ಜಾತಿ ನಿಂದನೆ ಮಾಡಿದ್ದಾನೆ ಎಂದು ವರದಿಯಾಗಿದೆ. ಬಲವೀರ್ ಪ್ರತಿಭಟಿಸಿದಾಗ, ವಿಜಯ್ ಕೋಪಗೊಂಡು ಚಾಕುವನ್ನು ಹೊರತೆಗೆದು ಬಲವೀರ್‌ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ. ಬಲಿಪಶು ಕುಸಿದು ಬಿದ್ದು, ತೀವ್ರ ರಕ್ತಸ್ರಾವವಾದಾಗ, ವಿಜಯ್ ಒಂದು ದೊಡ್ಡ ಕಲ್ಲನ್ನು ಎತ್ತಿಕೊಂಡು ಅವನ ತಲೆಗೆ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ.

ಮರುದಿನ ಬೆಳಿಗ್ಗೆ ದಾರಿಹೋಕರು ಬಲವೀರ್ ಅವರನ್ನು ಪತ್ತೆ ಮಾಡಿ ಪೊಲೀಸರಿಗೆ ತಿಳಿಸುವವರೆಗೂ ರಾತ್ರಿಯಿಡೀ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರ ಸ್ಥಿತಿ ಈಗ ಸ್ಥಿರವಾಗಿದೆ. ಆದರೆ, ಕುತ್ತಿಗೆ ಮತ್ತು ತಲೆಬುರುಡೆಗೆ ಆಳವಾದ ಗಾಯಗಳಾಗಿವೆ ಎಂದು ಹೇಳಿದರು.

ಬಲವೀರ್ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯಾಚರಣೆ ಆರಂಭಿಸಿದರು. ಠಾಣಾಧಿಕಾರಿ ರತ್ನಂಬರ್ ಶುಕ್ಲಾ ಅವರ ನಿರ್ದೇಶನದ ಮೇರೆಗೆ, ತಂಡವು ಆರೋಪಿ ವಿಜಯ್ ಶರ್ಮಾ ಅವರನ್ನು ಅವರ ಮನೆಯ ಬಳಿ ಬಂಧಿಸಿತು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2023 ರ ದತ್ತಾಂಶದ ಪ್ರಕಾರ, ದೇಶಾದ್ಯಂತ ಪರಿಶಿಷ್ಟ ಜಾತಿಗಳ ವಿರುದ್ಧದ ಅಪರಾಧಗಳು ಹೆಚ್ಚುತ್ತಲೇ ಇವೆ. ಕಳೆದ ವರ್ಷ 57,789 ಪ್ರಕರಣಗಳು ದಾಖಲಾಗಿವೆ, ಇದು 2022 ಕ್ಕೆ ಹೋಲಿಸಿದರೆ ಹೆಚ್ಚಳವಾಗಿದೆ. ಮಧ್ಯಪ್ರದೇಶದಲ್ಲಿ 8,232 ಇಂತಹ ಪ್ರಕರಣಗಳು ದಾಖಲಾಗಿದ್ದು, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ನಂತರ ಜಾತಿ ಸಂಬಂಧಿತ ಅಪರಾಧಗಳಲ್ಲಿ ಅಗ್ರ ಮೂರು ರಾಜ್ಯಗಳಲ್ಲಿ ಒಂದಾಗಿದೆ.

ಮುಸ್ಲಿಮ್‌-ದಲಿತ ಕ್ರೈಸ್ತರಿಗೆ ಎಸ್‌ಸಿ ಸ್ಥಾನಮಾನ; ಪರಿಶೀಲನಾ ಸಮಿತಿ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...