Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...