Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....