Homeಮುಖಪುಟನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

- Advertisement -
- Advertisement -

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಸಂಜೆ 6:55 ರ ಸುಮಾರಿಗೆ ಸ್ಫೋಟದ ಬಗ್ಗೆ ಕರೆ ಬಂದಿತು. ನಂತರ ಏಳು ಅಗ್ನಿಶಾಮಕ ವಾಹನಗಳು ಮತ್ತು 15 ಸಿಎಟಿ ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಸ್ಫೋಟದಿಂದಾಗಿ ಹತ್ತಿರದ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾದವು, ಅವೆಲ್ಲವನ್ನೂ ನಂತರ ನಂದಿಸಲಾಯಿತು.

ಹಲವಾರು ಶವಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ತರಲಾಗಿದ್ದು, ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟವು ಅತ್ಯಂತ ಶಕ್ತಿಶಾಲಿಯಾಗಿದ್ದು, ಹತ್ತಿರದ ಬೀದಿ ದೀಪಗಳನ್ನು ಪುಡಿಮಾಡಿ, ಸ್ಥಳದ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಉಂಟು ಮಾಡಿದೆ. ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ ಸೇರಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶದ ತಂಡವು ತನಿಖೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ತಲುಪಿದೆ.

ಸ್ಫೋಟದ ಕಾರಣ ತನಿಖೆ ಹಂತದಲ್ಲಿದ್ದರೂ, ಪೊಲೀಸರು ನಿಷೇಧಿತ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿ, ಸ್ಫೋಟಕಗಳನ್ನು ತಯಾರಿಸಲು ಬಳಸುವ ರಾಸಾಯನಿಕವಾದ 2,900 ಕಿಲೋಗ್ರಾಂಗಳಿಗೂ ಹೆಚ್ಚು ಶಂಕಿತ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. ವಶಪಡಿಸಿಕೊಂಡ ವಸ್ತುಗಳಿಂದ ತಯಾರಿಸಿದ ನೂರಾರು ಶಕ್ತಿಶಾಲಿ ಐಇಡಿಗಳನ್ನು ಬಳಸಿಕೊಂಡು ದೆಹಲಿಯನ್ನು ಭಯಭೀತಗೊಳಿಸಲು ಮಾಡ್ಯೂಲ್ ಯೋಜಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಪ್ರತ್ಯಕ್ಷದರ್ಶಿಗಳು ಸ್ಫೋಟವನ್ನು ‘ಭಯಾನಕ’ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. “ನಾನು ನನ್ನ ಮನೆಯಿಂದಲೇ ಬೆಂಕಿ ಜ್ವಾಲೆ ನೋಡಿದೆ. ನಂತರ ಏನಾಯಿತು ಎಂದು ನೋಡಲು ಕೆಳಗೆ ಬಂದೆ. ಜೋರಾದ ಸ್ಫೋಟ ಸಂಭವಿಸಿದೆ. ನಾನು ಹತ್ತಿರದಲ್ಲಿ ವಾಸಿಸುತ್ತಿದ್ದೇನೆ” ಎಂದು ಸ್ಥಳೀಯ ನಿವಾಸಿ ರಾಜಧರ್ ಪಾಂಡೆ ಹೇಳಿದರು.

“ನನ್ನ ಜೀವನದಲ್ಲಿ ನಾನು ಎಂದಿಗೂ ಇಷ್ಟು ದೊಡ್ಡ ಸ್ಫೋಟವನ್ನು ಕೇಳಿಲ್ಲ. ಸ್ಫೋಟದಿಂದಾಗಿ ನಾನು ಮೂರು ಬಾರಿ ಬಿದ್ದೆ. ನಾವೆಲ್ಲರೂ ಸಾಯುತ್ತೇವೆ ಎಂದು ಭಾಸವಾಯಿತು” ಎಂದು ಸ್ಥಳೀಯ ಅಂಗಡಿಯೊಬ್ಬ ನೆನಪಿಸಿಕೊಂಡರು.

ವಿಧಿವಿಜ್ಞಾನ ತಜ್ಞರು ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಕೆಂಪು ಕೋಟೆಯ ಸುತ್ತಲಿನ ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿದ್ದಾರೆ.

ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಭದ್ರತಾ ನಿಯೋಜನೆ ಮಾಡಲಾಗಿದೆ. ಮುಂಬೈ ಪೊಲೀಸರನ್ನು ಸಹ ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ಎಲ್ಲಾ ಠಾಣೆಗಳು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲ. ನಾಕಬಂದಿ ನಡೆಸುವ ಜೊತೆಗೆ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ತಪಾಸಣೆ ನಡೆಸಲು ನಿರ್ದೇಶಿಸಲಾಗಿದೆ.

ತಿರುಪತಿ ಪ್ರವೇಶ ಮಾರ್ಗದಲ್ಲಿ ಮಾಂಸಾಹಾರ ಸೇವನೆ; ಇಬ್ಬರು ನೌಕರರನ್ನು ವಜಾಗೊಳಿಸಿದ ಟಿಟಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...