Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...