Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...