Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...