Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...