Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...