Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...