Homeಮುಖಪುಟಮಹಿಳಾ ಸಿಬ್ಬಂದಿಯ 'ಮುಟ್ಟು ಸಾಬೀತಿಗೆ ಫೋಟೋ' ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ

ಮಹಿಳಾ ಸಿಬ್ಬಂದಿಯ ‘ಮುಟ್ಟು ಸಾಬೀತಿಗೆ ಫೋಟೋ’ ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ

- Advertisement -
- Advertisement -

ರೋಹ್ಟಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದ (ಎಂಡಿಯು) ಮಹಿಳಾ ನೈರ್ಮಲ್ಯ ಸಿಬ್ಬಂದಿಗೆ ಮುಟ್ಟು ಸಾಬೀತುಪಡಿಸಲು ಖಾಸಗಿ ಅಂಗದ ಫೋಟೋ ಕೇಳಲಾಗಿದೆ ಎಂಬ ಆಘಾತಕಾರಿ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಈ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಸ್‌ಸಿಬಿಎ ತನ್ನ ಅರ್ಜಿಯಲ್ಲಿ ಕೋರಿದೆ. ಮುಟ್ಟಿನ ಸಮಯದಲ್ಲಿ ಮಹಿಳೆಯರ ಘನತೆ, ಗೌಪ್ಯತೆ, ದೈಹಿಕ ಸ್ವಾಯತ್ತತೆ ಮತ್ತು ಆರೋಗ್ಯದ ಹಕ್ಕುಗಳನ್ನು ರಕ್ಷಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆಯೂ ಮನವಿ ಮಾಡಿದೆ.

ಮುಟ್ಟಿನ ಕಾರಣದಿಂದಾಗಿ ಅಸ್ವಸ್ಥರಾಗಿದ್ದಾರೆಂದು ತಿಳಿಸಿದ್ದರೂ, ಇಬ್ಬರು ಗುತ್ತಿಗೆ ಮೇಲ್ವಿಚಾರಕರು
ಕೆಲಸ ಮುಂದುವರಿಸಲು ಒತ್ತಾಯಿಸಿದ್ದಾರೆ. ತಮ್ಮ ಕೆಲಸ ವೇಗಗೊಳಿಸಲು ನಿರಾಕರಿಸಿದಾಗ ಮೇಲ್ವಿಚಾರಕರು ಖಾಸಗಿ ಅಂಗದ ಫೋಟೋವನ್ನು ಮುಟ್ಟಿನ ಪುರಾವೆಯಾಗಿ ಕೇಳಿದ್ದಾರೆ. ಅಲ್ಲದೆ, ಅವರನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಅಕ್ಟೋಬರ್ 31ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ, ಹಲ್ಲೆ ಮತ್ತು ಮಹಿಳೆಯರ ಘನತೆಗೆ ಅವಮಾನ ಮಾಡಿದ ಆರೋಪಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಕೂಡ ಅನ್ವಯಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವವಿದ್ಯಾನಿಲಯವು ಇಬ್ಬರು ಮೇಲ್ವಿಚಾರಕರನ್ನು ಅಮಾನತುಗೊಳಿಸಿದೆ ಮತ್ತು ಆಂತರಿಕ ತನಿಖೆಯನ್ನು ಪ್ರಾರಂಭಿಸಿದೆ. ಈ ಘಟನೆ ಅಕ್ಟೋಬರ್ 26 ರಂದು ಹರಿಯಾಣ ರಾಜ್ಯಪಾಲ ಆಶಿಮ್ ಕುಮಾರ್ ಘೋಷ್ ಅವರ ನಿಗದಿತ ಭೇಟಿಗೆ ಮುಂಚಿತವಾಗಿ ನಡೆದಿದೆ ಎಂದು ವರದಿಯಾಗಿದೆ.

ತಮ್ಮ ವಿರುದ್ದದ ಆರೋಪಗಳಿಗೆ ಪ್ರತಿಕ್ರಿಯಿಸಿದ ಮೇಲ್ವಿಚಾರಕರು, ನಾವು ಮೇಲಧಿಕಾರಿಗಳ ಆದೇಶ ಪಾಲಿಸಿದ್ದೇವೆ ಎಂದಿದ್ದಾರೆ. ಇದನ್ನು ತಳ್ಳಿ ಹಾಕಿರುವ ವಿವಿಯ ಸಹಾಯಕ ರಿಜಿಸ್ಟ್ರಾರ್ ಶ್ಯಾಮ್ ಸುಂದರ್, ನಾವು ಅಂತಹ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ಎಂಡಿಯುನಲ್ಲಿ ನಡೆದ ಘಟನೆ “ಮಹಿಳೆಯರ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆ” ಎಂದು ಎಸ್‌ಸಿಬಿಎ ತನ್ನ ಅರ್ಜಿಯಲ್ಲಿ ಹೇಳಿದೆ. ಭವಿಷ್ಯದಲ್ಲಿ ಈ ರೀತಿಯ ದೌರ್ಜನ್ಯಗಳನ್ನು ತಡೆಗಟ್ಟಲು ವ್ಯವಸ್ಥಿತ ರಕ್ಷಣೆಗಳನ್ನು ಕೋರಿದೆ.

ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ’ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...