Homeಕರ್ನಾಟಕಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ: ರಾಷ್ಟ್ರಪತಿ, ಪ್ರಧಾನಿಗೆ ರಾಜು ಕಾಗೆ ಪತ್ರ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ: ರಾಷ್ಟ್ರಪತಿ, ಪ್ರಧಾನಿಗೆ ರಾಜು ಕಾಗೆ ಪತ್ರ

- Advertisement -
- Advertisement -

ಉತ್ತರ ಕರ್ನಾಟಕವು ಪ್ರತಿಯೊಂದು ವಲಯದಲ್ಲೂ ಅನ್ಯಾಯ, ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಎದುರಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಪ್ರದೇಶದ 15 ಜಿಲ್ಲೆಗಳಿಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಜನರ ದಶಕಗಳಷ್ಟು ಹಳೆಯದಾದ ಬೇಡಿಕೆಯನ್ನು ಮತ್ತೆ ಮುನ್ನಲೆಗೆ ತಂದಿರುವ ಕಾಗವಾಡ ಶಾಸಕ ರಾಜು ಕಾಗೆ, ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಾರಂಭಿಸಿದ ಸಹಿ ಸಂಗ್ರಹ ಅಭಿಯಾನವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

“ಆಡಳಿತಾತ್ಮಕ ಅನುಕೂಲತೆ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ದಾವಣಗೆರೆಗಳನ್ನು ಒಳಗೊಂಡ ಹೊಸ ರಾಜ್ಯವನ್ನು ರಚಿಸಬೇಕೆಂಬ ನನ್ನ ಬಲವಾದ ಬೇಡಿಕೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ರಾಜು ಕಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಮತ್ತು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನವೆಂಬರ್ 4ರಂದು ರಾಜು ಕಾಗೆ ಬರೆದ ಪತ್ರವನ್ನು ಅವರ ಕಚೇರಿ ಬುಧವಾರ (ನ.12) ಬಿಡುಗಡೆ ಮಾಡಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಕಾಗೆ, ಈ ಹಿಂದೆ ರಾಜ್ಯ ಸರ್ಕಾರವನ್ನು ಸಾರ್ವಜನಿಕವಾಗಿ ಟೀಕಿಸಿದ್ದರು. ಅಭಿವೃದ್ಧಿ ಮತ್ತು ಹಣದ ಕೊರತೆಯ ಬಗ್ಗೆ ದೂರಿ ವಿಧಾನಸಭೆಯ ಸದಸ್ಯತ್ವವನ್ನು ತ್ಯಜಿಸುವುದಾಗಿ ಬೆದರಿಕೆ ಹಾಕಿದ್ದರು.

ಕಳೆದ ಸೆಪ್ಟೆಂಬರ್‌ನಲ್ಲಿ, ಉತ್ತರ ಕರ್ನಾಟಕ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ಎಂಬ ಪ್ರತ್ಯೇಕ ರಾಜ್ಯ ಸ್ಥಾನವನ್ನು ಕೋರುವುದರಲ್ಲಿ ಯಾವುದೇ ತಪ್ಪಿಲ್ಲ, ಏಕೆಂದರೆ ಕಿತ್ತೂರು ಕರ್ನಾಟಕ ಪ್ರದೇಶದ ಕೆಲವು ಸ್ಥಳಗಳನ್ನು ಹೊರತುಪಡಿಸಿ, ಅದು ಕಲ್ಯಾಣ ಕರ್ನಾಟಕ ಪ್ರದೇಶದಂತೆ ಅಭಿವೃದ್ಧಿ ಹೊಂದಿಲ್ಲ ಎಂದು ರಾಜು ಕಾಗೆ ಹೇಳಿದ್ದರು. ಕಲ್ಯಾಣ ಕರ್ನಾಟಕಕ್ಕೆ ಭಾರತದ ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಸ್ಥಾನಮಾನವಿದೆ.

ಪ್ರತ್ಯೇಕ ರಾಜ್ಯ ರಚನೆಯು ಮತ್ತೊಂದು ಹೆಮ್ಮೆಯ ಕನ್ನಡ ಮಾತನಾಡುವ ರಾಜ್ಯಕ್ಕೆ ಜನ್ಮ ನೀಡುತ್ತದೆ. ಇದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಉತ್ತರ ಕರ್ನಾಟಕವು ಎಲ್ಲಾ ರೀತಿಯ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಪ್ರದೇಶವಾಗಿದ್ದು, ಕನ್ನಡ ಭಾಷೆಯ ಸಂರಕ್ಷಣೆ ಮತ್ತು ಕರ್ನಾಟಕದ ಏಕೀಕರಣಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ರಾಜು ಕಾಗೆ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರತಿನಿಧಿಗಳ ಸಹಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಕಾಗೆ, ಒಂದು ಕೋಟಿಗೂ ಹೆಚ್ಚು ಜನರು ಈಗಾಗಲೇ ಲಿಖಿತ ಒಪ್ಪಿಗೆ ನೀಡಿ ಬೇಡಿಕೆಯ ಪರವಾಗಿ ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ ಪ್ರದೇಶದ ಎಲ್ಲಾ ವರ್ಗಗಳ ಜನರು ತಮ್ಮ ಒಟ್ಟಾರೆ ಮತ್ತು ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಆದ್ದರಿಂದ, ದಯವಿಟ್ಟು ನಮ್ಮ ಮನವಿಯನ್ನು ಪರಿಗಣಿಸಿ ಮತ್ತು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ನಾನು ವಿನಮ್ರವಾಗಿ ವಿನಂತಿಸುತ್ತೇನೆ ಎಂದು ಕಾಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ವರ್ಷದ ಜನವರಿ 3ರಂದು ರಾಷ್ಟ್ರಪತಿ ಮತ್ತು ಜನವರಿ 5 ರಂದು ಪ್ರಧಾನ ಮಂತ್ರಿ ಕಚೇರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗಿದೆ ಎಂದು ಕಾಗೆ ತನ್ನ ಪತ್ರದಲ್ಲಿ ನೆನಪಿಸಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಕಾಗೆ, ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

2022ರಲ್ಲಿ, ಬಿಜೆಪಿ ನಾಯಕ ಮತ್ತು ಆಗಿನ ಸಚಿವ ದಿವಂಗತ ಉಮೇಶ್ ಕತ್ತಿ ಅವರು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ್ದರು. ಈ ಪ್ರದೇಶವು ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿದ್ದರು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಅಂತಹ ಬೇಡಿಕೆಗಳನ್ನು ಕೇಂದ್ರವು ಪರಿಶೀಲಿಸುತ್ತಿದೆ ಎಂದು ಅವರು ತಿಳಿಸಿದ್ದರು.

ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...