Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ನಿರ್ಮಿಸಲು ಮುಂದಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ನ.13) ವಜಾಗೊಳಿಸಿದ್ದು, ಪ್ರಸ್ತುತ ಅರ್ಜಿಯು ‘ಅಕಾಲಿಕ’ವಾಗಿದೆ (ಮುಂಚಿತವಾಗಿ ಅಥವಾ ತುಂಬಾ ಬೇಗ ಸಲ್ಲಿಸಲಾಗಿದೆ) ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ತಮಿಳುನಾಡಿನ ಆಕ್ಷೇಪಣೆಗಳು ಹಾಗೂ ತಜ್ಞ ಸಂಸ್ಥೆಗಳು, ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮತ್ತು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಅಭಿಪ್ರಾಯಗಳನ್ನು ಪರಿಗಣಿಸಿದ ನಂತರವೇ ಯೋಜನೆಯನ್ನು ಅನುಮೋದಿಸಲಾಗುವುದು ಎಂದು ಹೇಳಿದೆ.

ಈ ಹಂತದಲ್ಲಿ, ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಹೊರಡಿಸಿದ ಆದೇಶದಿಂದ ಮಾಡುತ್ತಿರುವ ಕೆಲಸ ಕೇವಲ ವಿವರವಾದ ಯೋಜನಾ ವರದಿ (ಡಿಪಿಆರ್‌) ತಯಾರಿಕೆ ಮಾತ್ರ, ಅದೂ ಕೂಡ, ತಮಿಳುನಾಡು ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗಳು, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ), ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ)ಯ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು (ಆಗಸ್ಟ್ 2023ರಲ್ಲಿ ಹೊರಡಿಸಿದ್ದು) ಸಹ ಉಲ್ಲೇಖಿಸಿದೆ. 2023ರ ಮುಂಗಾರು ಋತುವಿನ ಸಂಬಂಧಿತ ಸಮಸ್ಯೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು. ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಸಿಡಬ್ಲ್ಯೂಎಂಎಗೆ ಸೂಚಿಸಿತ್ತು. ನ್ಯಾಯಾಲಯಕ್ಕೆ ಈ ವಿಷಯದಲ್ಲಿ ತಜ್ಞತೆ ಇಲ್ಲ ಎಂದು ಹೇಳಿತ್ತು.

25 ಆಗಸ್ಟ್ 2023ರ ಆದೇಶದಲ್ಲಿ ನಾವು ಹೇಳಿದ್ದನ್ನು ಮತ್ತೊಮ್ಮೆ ಪುನರುಚ್ಚರಿಸುತ್ತೇವೆ. ನಮಗೆ ಈ ವಿಷಯದಲ್ಲಿ ತಜ್ಞತೆ ಇಲ್ಲ. ತಜ್ಞರ ಕೆಲಸಕ್ಕೆ ನಾವು ಅಡ್ಡಿ ಬರಬಾರದು ಎಂದು ನ್ಯಾಯಾಲಯ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಸಿಡಬ್ಲ್ಯೂಸಿಯ ನಿರ್ದೇಶನವು ತಜ್ಞ ಸಂಸ್ಥೆಗಳ ಸಲಹೆಗಳನ್ನು ಆಧರಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. ಅಷ್ಟೇ ಅಲ್ಲ, ಸಿಡಬ್ಲ್ಯೂಎಂಎ ಅದನ್ನು ಅನುಮೋದಿಸಿದರೆ ಮಾತ್ರ ಯೋಜನೆಯನ್ನು ಸಿಡಬ್ಲ್ಯೂಸಿ ಪರಿಗಣಿಸುತ್ತದೆ. ಈ ದೃಷ್ಟಿಯಿಂದ ನೋಡಿದಾಗ, ತಜ್ಞ ಸಂಸ್ಥೆ (ಸಿಡಬ್ಲ್ಯೂಎಂಎ) ಈ ವಿಷಯವನ್ನು ಪರಿಶೀಲಿಸುತ್ತಿರುವಾಗ, ಪ್ರಸ್ತುತ ಅರ್ಜಿಯು ಅಕಾಲಿಕ (ಮುಂಚಿತವಾಗಿ ಸಲ್ಲಿಸಲಾಗಿದೆ) ಎಂದು ನಾವು ಕಂಡುಕೊಂಡಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಾಲಯ ಮತ್ತು ಅಧಿಕಾರಿಗಳ ನಿರ್ದೇಶನಗಳನ್ನು ಅನುಸರಿಸಿ ತಮಿಳುನಾಡಿಗೆ ನೀರು ಬಿಡಲು ಬದ್ದವಾಗಿರುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ಈ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಕರ್ನಾಟಕ ವಿಫಲವಾದರೆ, ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಇದೇ ವೇಳೆ ಕೋರ್ಟ್ ಎಚ್ಚರಿಸಿದೆ.

ಒಂದು ವೇಳೆ ಡಿಪಿಆರ್ ಅನ್ನು ಸಿಡಬ್ಲ್ಯೂಸಿ ಅನುಮೋದಿಸಿದರೆ, ತಮಿಳುನಾಡು ರಾಜ್ಯಕ್ಕೆ ಕಾನೂನಿನಡಿ ಅನುಮತಿಸಲಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡು ಅದನ್ನು ಪ್ರಶ್ನಿಸಲು ಸ್ವತಂತ್ರವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 

ತಮಿಳುನಾಡು 2007ರಲ್ಲಿ ಕಾವೇರಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಅದು 2018ರಲ್ಲಿ ಮುಗಿಯಿತು. ಈಗ ಈ ಹೊಸ ಅರ್ಜಿಯನ್ನು ಆ ಹಳೆಯ ಮೇಲ್ಮನವಿಯಲ್ಲಿಯೇ ‘ವಿವಿಧ ಅರ್ಜಿ’ (Miscellaneous Application)ಎಂದು ಸೇರಿಸಿ ಸಲ್ಲಿಸಲಾಗಿದೆ.

1956ರ ಅಂತರ ರಾಜ್ಯ ನದಿ ಜಲ ವಿವಾದಗಳ ಕಾಯ್ದೆಯ (Inter-State River Water Disputes Act)ಸೆಕ್ಷನ್ 6A ಯಡಿ ನೀಡಲಾಗಿರುವ ಅಧಿಕಾರಗಳನ್ನು ಬಳಸಿಕೊಂಡು, ಕೇಂದ್ರ ಸರ್ಕಾರವು 2018ರಲ್ಲಿ ‘ಕಾವೇರಿ ಜಲ ನಿರ್ವಹಣಾ ಯೋಜನೆ’ (Cauvery Water Management Scheme) ಅನ್ನು ಅಧಿಸೂಚಿಸಿದೆ.

ಇದರ ಮುಖ್ಯ ಉದ್ದೇಶ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ’ (Cauvery Water Management Authority – CWMA) ಅನ್ನು ಸ್ಥಾಪಿಸುವುದು. ಇದನ್ನು ಕಾವೇರಿ ಜಲ ವಿವಾದ ನ್ಯಾಯಮಂಡಳಿ (Tribunal) ಯ ತೀರ್ಪನ್ನು ಜಾರಿಗೆ ತರುವುದಕ್ಕಾಗಿ ಮಾಡಲಾಗಿದೆ. ಆ ತೀರ್ಪನ್ನು ಸುಪ್ರೀಂ ಕೋರ್ಟ್ 16.02.2018ರ ಆದೇಶದ ಮೂಲಕ ತಿದ್ದುಪಡಿ ಮಾಡಿದೆ.

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...