Homeಮುಖಪುಟರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

- Advertisement -
- Advertisement -

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಇಜಾಝುದ್ದೀನ್ ಸಲಾವುದ್ದೀನ್ ಕಾಜಿ ಮತ್ತು ನ್ಯಾಯಾಲಯದ ಗುಮಾಸ್ತ ಚಂದ್ರಕಾಂತ್ ಹನ್ಮಂತ್ ವಾಸುದೇವ್ ವಿರುದ್ಧ ಪ್ರಕರಣ ದಾಖಲಿಸಿದೆ.

ಎಸಿಬಿಯ ಪತ್ರಿಕಾ ಟಿಪ್ಪಣಿಯ ಪ್ರಕಾರ, ದೂರುದಾರರ ಪತ್ನಿ 2015ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ತನ್ನ ಭೂಮಿಯನ್ನು ಬಲವಂತವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 2016 ರಲ್ಲಿ, ಹೈಕೋರ್ಟ್ ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಹಕ್ಕುಗಳ ಸೃಷ್ಟಿಯನ್ನು ((ಮೂರನೇ ವ್ಯಕ್ತಿಯ ಪ್ರವೇಶ) ತಡೆಯುವ ಮಧ್ಯಂತರ ಆದೇಶವನ್ನು ಹೊರಡಿಸಿತ್ತು.

ಆಸ್ತಿಯ ಮೌಲ್ಯ 10 ಕೋಟಿ ರೂಪಾಯಿಗಿಂತ ಕಡಿಮೆ ಇದ್ದ ಕಾರಣ, ಮಾರ್ಚ್ 2024ರಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ಮಜಗಾಂವ್‌ನಲ್ಲಿರುವ ಸಿವಿಲ್ ನ್ಯಾಯಾಲಯಕ್ಕೆ ವಾಣಿಜ್ಯ ಮೊಕದ್ದಮೆಯಾಗಿ ವರ್ಗಾಯಿಸಿತ್ತು.

ಈ ವರ್ಷ ಸೆಪ್ಟೆಂಬರ್ 9ರಂದು, ದೂರುದಾರನ ಉದ್ಯೋಗಿ (ದೂರುದಾರರ ಪರ ವ್ಯಕ್ತಿ) ನ್ಯಾಯಾಲಯದಲ್ಲಿ ಹಾಜರಿದ್ದಾಗ, ನ್ಯಾಯಾಲಯದ ಗುಮಾಸ್ತ ವಾಸುದೇವ್ ದೂರುದಾರರನ್ನು ಸಂಪರ್ಕಿಸಿ ಭೇಟಿಯಾಗಲು ಹೇಳಿದ್ದರು.

ಅದರಂತೆ, ದೂರುದಾರರು ಸೆಪ್ಟೆಂಬರ್ 12ರಂದು ಚೆಂಬೂರಿನ ಸ್ಟಾರ್‌ಬಕ್ಸ್ ಕೆಫೆಯಲ್ಲಿ ವಾಸುದೇವ್ ಅವರನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ. ಅಲ್ಲಿ ವಾಸುದೇವ್ ಅವರು ಅನುಕೂಲಕರ ಆದೇಶಗಳನ್ನು ಪಡೆಯಲು ಒಟ್ಟು 25 ಲಕ್ಷ ರೂಪಾಯಿ, ಅಂದರೆ ತನಗೆ 10 ಲಕ್ಷ ರೂ. ಮತ್ತು ನ್ಯಾಯಾಧೀಶರಿಗೆ 15 ಲಕ್ಷ ರೂ. ಲಂಚವನ್ನು ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.

ವಾಸುದೇವ್ ಕೇಳಿದ ಹಣವನ್ನು ಕೊಡಲು ದೂರುದಾರ ನಿರಾಕರಿಸಿದ್ದರು. ಆದರೂ, ಮುಂದಿನ ಹಲವು ವಾರಗಳವರೆಗೆ, ವಾಸುದೇವ್ ಲಂಚ ಕೇಳುವುದನ್ನು ಮುಂದುವರೆಸಿದ್ದರು. ನಂತರ, ನವೆಂಬರ್ 10ರಂದು ದೂರುದಾರ ಎಸಿಬಿಯನ್ನು ಸಂಪರ್ಕಿಸಿದ್ದರು.

ಅದೇ ದಿನ ಎಸಿಬಿ ಅಧಿಕಾರಿಗಳು ಪಂಚ ಸಾಕ್ಷಿಯ ಸಮ್ಮುಖದಲ್ಲಿ ಆರೋಪದ ಪರಿಶೀಲನಾ ಕಾರ್ಯವನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ವಾಸುದೇವ್ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಕಡಿಮೆ ಮೊತ್ತ, ಅಂದರೆ, 15 ಲಕ್ಷ ರೂಪಾಯಿ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆರೋಪ ಖಚಿತವಾದ ಬಳಿಕ, ಆರೋಪಿಯ ಬಂಧನಕ್ಕೆ ನವೆಂಬರ್ 11ರಂದು ಎಸಿಬಿ ಬಲೆ ಬೀಸಿತ್ತು. ವಾಸುದೇವ್ ದೂರುದಾರರಿಂದ 15 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಹಣ ತೆಗೆದುಕೊಂಡ ತಕ್ಷಣ, ವಾಸುದೇವ್ ಅವರು ನ್ಯಾಯಾಧೀಶ ಎಜಾಝುದ್ದೀನ್ ಕಾಜಿ ಅವರಿಗೆ ತಮ್ಮ ಫೋನ್‌ನಲ್ಲಿ ಕರೆ ಮಾಡಿ ಲಂಚ ಪಡೆದ ಬಗ್ಗೆ ಮಾಹಿತಿ ನೀಡಿದ್ದರು. ನ್ಯಾಯಾಧೀಶರು ಕೂಡ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ವಾಸುದೇವ್ ಮತ್ತು ನ್ಯಾಯಾಧೀಶ ಕಾಜಿ ಇಬ್ಬರ ಮೇಲೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಮತ್ತು 7ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆ ಸಾರ್ವಜನಿಕ ಕರ್ತವ್ಯದಲ್ಲಿರುವವರ ಅಕ್ರಮ ಸಂತೃಪ್ತಿಯನ್ನು ಬೇಡಿಕೆ, ಸ್ವೀಕಾರ ಮತ್ತು ಪಡೆಯುವುದಕ್ಕೆ ಸಂಬಂಧಿಸಿದೆ.

ನ್ಯಾಯಾಧೀಶ ಕಾಜಿ ಇಂದು (ನವೆಂಬರ್ 13, 2025) ನ್ಯಾಯಾಲಯದಲ್ಲಿ ಕಲಾಪ ನಡೆಸುತ್ತಿಲ್ಲ ಎಂದು ಮೂಲಗಳು ಖಚಿತಪಡಿಸಿರುವುದಾಗಿ ಬಾರ್ & ಬೆಂಚ್‌ ವರದಿ ಮಾಡಿದೆ.

ಮಾಹಿತಿ ಕೃಪೆ : ಬಾರ್ & ಬೆಂಚ್

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...