Homeಮುಖಪುಟರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

- Advertisement -
- Advertisement -

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಇಜಾಝುದ್ದೀನ್ ಸಲಾವುದ್ದೀನ್ ಕಾಜಿ ಮತ್ತು ನ್ಯಾಯಾಲಯದ ಗುಮಾಸ್ತ ಚಂದ್ರಕಾಂತ್ ಹನ್ಮಂತ್ ವಾಸುದೇವ್ ವಿರುದ್ಧ ಪ್ರಕರಣ ದಾಖಲಿಸಿದೆ.

ಎಸಿಬಿಯ ಪತ್ರಿಕಾ ಟಿಪ್ಪಣಿಯ ಪ್ರಕಾರ, ದೂರುದಾರರ ಪತ್ನಿ 2015ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ತನ್ನ ಭೂಮಿಯನ್ನು ಬಲವಂತವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 2016 ರಲ್ಲಿ, ಹೈಕೋರ್ಟ್ ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಹಕ್ಕುಗಳ ಸೃಷ್ಟಿಯನ್ನು ((ಮೂರನೇ ವ್ಯಕ್ತಿಯ ಪ್ರವೇಶ) ತಡೆಯುವ ಮಧ್ಯಂತರ ಆದೇಶವನ್ನು ಹೊರಡಿಸಿತ್ತು.

ಆಸ್ತಿಯ ಮೌಲ್ಯ 10 ಕೋಟಿ ರೂಪಾಯಿಗಿಂತ ಕಡಿಮೆ ಇದ್ದ ಕಾರಣ, ಮಾರ್ಚ್ 2024ರಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ಮಜಗಾಂವ್‌ನಲ್ಲಿರುವ ಸಿವಿಲ್ ನ್ಯಾಯಾಲಯಕ್ಕೆ ವಾಣಿಜ್ಯ ಮೊಕದ್ದಮೆಯಾಗಿ ವರ್ಗಾಯಿಸಿತ್ತು.

ಈ ವರ್ಷ ಸೆಪ್ಟೆಂಬರ್ 9ರಂದು, ದೂರುದಾರನ ಉದ್ಯೋಗಿ (ದೂರುದಾರರ ಪರ ವ್ಯಕ್ತಿ) ನ್ಯಾಯಾಲಯದಲ್ಲಿ ಹಾಜರಿದ್ದಾಗ, ನ್ಯಾಯಾಲಯದ ಗುಮಾಸ್ತ ವಾಸುದೇವ್ ದೂರುದಾರರನ್ನು ಸಂಪರ್ಕಿಸಿ ಭೇಟಿಯಾಗಲು ಹೇಳಿದ್ದರು.

ಅದರಂತೆ, ದೂರುದಾರರು ಸೆಪ್ಟೆಂಬರ್ 12ರಂದು ಚೆಂಬೂರಿನ ಸ್ಟಾರ್‌ಬಕ್ಸ್ ಕೆಫೆಯಲ್ಲಿ ವಾಸುದೇವ್ ಅವರನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ. ಅಲ್ಲಿ ವಾಸುದೇವ್ ಅವರು ಅನುಕೂಲಕರ ಆದೇಶಗಳನ್ನು ಪಡೆಯಲು ಒಟ್ಟು 25 ಲಕ್ಷ ರೂಪಾಯಿ, ಅಂದರೆ ತನಗೆ 10 ಲಕ್ಷ ರೂ. ಮತ್ತು ನ್ಯಾಯಾಧೀಶರಿಗೆ 15 ಲಕ್ಷ ರೂ. ಲಂಚವನ್ನು ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.

ವಾಸುದೇವ್ ಕೇಳಿದ ಹಣವನ್ನು ಕೊಡಲು ದೂರುದಾರ ನಿರಾಕರಿಸಿದ್ದರು. ಆದರೂ, ಮುಂದಿನ ಹಲವು ವಾರಗಳವರೆಗೆ, ವಾಸುದೇವ್ ಲಂಚ ಕೇಳುವುದನ್ನು ಮುಂದುವರೆಸಿದ್ದರು. ನಂತರ, ನವೆಂಬರ್ 10ರಂದು ದೂರುದಾರ ಎಸಿಬಿಯನ್ನು ಸಂಪರ್ಕಿಸಿದ್ದರು.

ಅದೇ ದಿನ ಎಸಿಬಿ ಅಧಿಕಾರಿಗಳು ಪಂಚ ಸಾಕ್ಷಿಯ ಸಮ್ಮುಖದಲ್ಲಿ ಆರೋಪದ ಪರಿಶೀಲನಾ ಕಾರ್ಯವನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ವಾಸುದೇವ್ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಕಡಿಮೆ ಮೊತ್ತ, ಅಂದರೆ, 15 ಲಕ್ಷ ರೂಪಾಯಿ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆರೋಪ ಖಚಿತವಾದ ಬಳಿಕ, ಆರೋಪಿಯ ಬಂಧನಕ್ಕೆ ನವೆಂಬರ್ 11ರಂದು ಎಸಿಬಿ ಬಲೆ ಬೀಸಿತ್ತು. ವಾಸುದೇವ್ ದೂರುದಾರರಿಂದ 15 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಹಣ ತೆಗೆದುಕೊಂಡ ತಕ್ಷಣ, ವಾಸುದೇವ್ ಅವರು ನ್ಯಾಯಾಧೀಶ ಎಜಾಝುದ್ದೀನ್ ಕಾಜಿ ಅವರಿಗೆ ತಮ್ಮ ಫೋನ್‌ನಲ್ಲಿ ಕರೆ ಮಾಡಿ ಲಂಚ ಪಡೆದ ಬಗ್ಗೆ ಮಾಹಿತಿ ನೀಡಿದ್ದರು. ನ್ಯಾಯಾಧೀಶರು ಕೂಡ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ವಾಸುದೇವ್ ಮತ್ತು ನ್ಯಾಯಾಧೀಶ ಕಾಜಿ ಇಬ್ಬರ ಮೇಲೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಮತ್ತು 7ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆ ಸಾರ್ವಜನಿಕ ಕರ್ತವ್ಯದಲ್ಲಿರುವವರ ಅಕ್ರಮ ಸಂತೃಪ್ತಿಯನ್ನು ಬೇಡಿಕೆ, ಸ್ವೀಕಾರ ಮತ್ತು ಪಡೆಯುವುದಕ್ಕೆ ಸಂಬಂಧಿಸಿದೆ.

ನ್ಯಾಯಾಧೀಶ ಕಾಜಿ ಇಂದು (ನವೆಂಬರ್ 13, 2025) ನ್ಯಾಯಾಲಯದಲ್ಲಿ ಕಲಾಪ ನಡೆಸುತ್ತಿಲ್ಲ ಎಂದು ಮೂಲಗಳು ಖಚಿತಪಡಿಸಿರುವುದಾಗಿ ಬಾರ್ & ಬೆಂಚ್‌ ವರದಿ ಮಾಡಿದೆ.

ಮಾಹಿತಿ ಕೃಪೆ : ಬಾರ್ & ಬೆಂಚ್

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...