Homeಕರ್ನಾಟಕಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಸಹಕಾರ ಕ್ಷೇತ್ರಕ್ಕೆ ಪ್ರೇರಣೆ ನೀಡಿದರು: ಸಿ.ಎಂ.ಸಿದ್ದರಾಮಯ್ಯ

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಸಹಕಾರ ಕ್ಷೇತ್ರಕ್ಕೆ ಪ್ರೇರಣೆ ನೀಡಿದರು: ಸಿ.ಎಂ.ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. 

ನೆಹರು ಜನ್ಮದಿನದ ಪ್ರಯುಕ್ತ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಹಕಾರಿ ಪುರಸ್ಕೃತರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ವಿತರಿಸಿ ಅವರು ಮಾತನಾಡಿದರು.  

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ನಮ್ಮ ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ. 

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರು ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರು ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು ಎಂದು ವಿವರಿಸಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು 25000 ಕೋಟಿ, ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾ ಮಂಡಳಿಗಳ ಮಹಾನ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು ಎಂದು ತಿಳಿಸಿದರು. 

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಮೊತ್ತವನ್ನು ಲೀಟರಿಗೆ 3ರೂ ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5ರೂಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ನೇರ ಅವರ ಬ್ಯಾಂಕ್ ಖಾತೆಗಳಿಗೆ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲಾ ಹಾಲು ಮಹಾ ಮಂಡಳಿ ತಾಯಿಬೇರು ಇದ್ದ ಹಾಗೆ ಎಂದು ಶ್ಲಾಘಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...