Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...