Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...