Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...