Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...