Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...