Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...