Homeಕರ್ನಾಟಕಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

ಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

- Advertisement -
- Advertisement -

ಇಂದು ದೇಶಾದ್ಯಂತ ಪೌರತ್ವ ಕಾಯ್ದೆಯ ವಿರುದ್ಧ ಶಾಂತಿಯುವ ಪ್ರತಿಭಟನೆಗೆ ಪ್ರಗತಿಪರ ಸಂಘಟನೆಗಳು ಮತ್ತು ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವರು. ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರಿಂದ ಬೆದರಿದ ಸರ್ಕಾರಗಳು ಹಲವು ಬಿಜೆಪಿ ಆಡಳಿತವಿರುವಲ್ಲಿ ಪ್ರತಿಭಟನೆಗಳಿಗೆ ಅನುಮತಿ ರದ್ದುಪಡಿಸಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಆದರೆ ನಿಷೇದಾಜ್ಞೆಯನ್ನು ಧಿಕ್ಕರಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆಗೆ ದೇಶದೆಲ್ಲೆಡೆ ಮುಂದಾಗಿದ್ದಾರೆ. ಅದರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಪ್ರತಿಭಟನೆಗಳು ಇನ್ನು ನಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಪ್ರಪಂಚದ ಖ್ಯಾತ ಇತಿಹಾಸಕಾರರಾದ ರಾಮಚಂದ್ರ ಗುಹರವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ದುರಹಂಕಾರಿ ಆಳುವವರೇ, ಇಂತಹ ಚಿತ್ರಗಳು ನಿಮ್ಮ ವಿಶ್ವಗುರುವಿನ ಮರ್ಯಾದೆಯನ್ನು ಜಾಗತಿಕವಾಗಿ ಇನ್ನಷ್ಟು ಹರಾಜು ಹಾಕುತ್ತವೆ. ರಾಮಚಂದ್ರ ಗುಹಾ ಎಂದರೆ ಯಾರು ಎನ್ನುವುದು ನಿಮಗೆ ಗೊತ್ತೇ?

ಶಾಂತಿಯುತ ಪ್ರತಿಭಟನೆಗಳಿಗೂ ಸಹ ಅನುಮತಿ ಇಲ್ಲ. ಮೂಲಭೂತ ಹಕ್ಕುಗಳು ಭಾರತದಲ್ಲಿ ಜೋಕ್‌ಗಳಾಗಿವೆ ಎಂದು ಶ್ರೀನಿವಾಸ್‌ ಕಾರ್ಕಳರವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಭಾರತದ ಅಗ್ರಗಣ್ಯ ಸಾರ್ವಜನಿಕ ಬುದ್ಧಿಜೀವಿಗಳಲ್ಲಿ ಒಬ್ಬರಾದ ರಾಮಚಂದ್ರ ಗುಹಾ, ಗಾಂಧಿ ಮತ್ತು ಅಂಬೇಡ್ಕರ್‌ರವರ ಪೋಸ್ಟರ್ ಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಮತ್ತು ಸಿಎಎ-ಎನ್ಆರ್ಸಿ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ್ದಕ್ಕಾಗಿ ಬೆಂಗಳೂರಿನಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಮತ್ತು ಬಂಧಿಸಿದ್ದಾರೆ. ಭಾರತವು ಸರ್ವಾಧಿಕಾರಕ್ಕೆ ಇಳಿಯುತ್ತಿರುವ ಮೈಲಿಗಲ್ಲು ಇದಾಗಿದೆ ಎಂದು ಖ್ಯಾತ ಬರಹಗಾರರ ಶಿವಂ ವಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಚಿಕೆಗೆಟ್ಟ ಸರ್ಕಾರ ಒಕ್ಕೂಟದ ರಾಜಧಾನಿ ದೆಹಲಿಯ ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸಿದೆ . ಲೋಕಪಾಲ್ ಚಳುವಳಿಯ ಸಮಯದಲ್ಲಿ ಹಿಂದಿನ ಸರಕಾರವೂ ಜನ ಸೇರಲು ಬಿಡದೆ ಇಂತದ್ದೊಂದು ಕ್ರಮಕ್ಕೆ ಮುಂದಾಗಬಹುದಿತ್ತು. ಆದರೆ ಮಾಡಿರಲಿಲ್ಲ ಯಾಕೆ? ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ಸರ್ಕಾರವೊಂದು ನಡೆದುಕೊಳ್ಳುವ ರೀತಿಯದು. ಬೆಂಗಳೂರಿನಲ್ಲಿ ನಿಷೇದಾಜ್ಞೆಯ ಹೊರತಾಗಿಯೂ ಪ್ರತಿಭಟನೆಗಳಾಗಿವೆ. ಎಲ್ಲೂ ಹಿಂಸಾಚಾರಕ್ಕೆ ತಿರುಗಿದ ಸುದ್ದಿ ಇದುವರೆಗೆ ಬಂದಿಲ್ಲ . ಈ ಮಧ್ಯೆ ಕರ್ನಾಟಕ ಹೈಕೋರ್ಟಿನಲ್ಲಿ ಸರ್ಕಾರದ ನಿಷೇದಾಜ್ಞೆ ಪ್ರಶ್ನಿಸಿ 40 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಳೆ ಅದು ವಿಚಾರಣೆಗೆ ಬರಲಿದೆ. ಅಲ್ಲಿಯ ತನಕ ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ. ಸರ್ಕಾರಕ್ಕೆ ನಾಳೆ ಕೋರ್ಟಿನಲ್ಲಿ ಕೊಡಲು ಹಿಂಸಾಚಾರದ ಕಾರಣ ಇಲ್ಲದಿರಲಿ ಎಂದು ಕುಂಟಾಡಿ ನಿತೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಬಿಜೆಪಿ ಅಡಿಯಲ್ಲಿ ಭಾರತ !!! ರಾಮಚಂದ್ರ ಗುಹಾ ಯಾರೆಂದು ನಿಮಗೆ ತಿಳಿದಿಲ್ಲ- ಅದನ್ನು ಮರೆತುಬಿಡಿ. ಆದರೆ ಅವರು ಗಾಂಧಿಯವರ ಆತ್ಮಚರಿತ್ರೆಯನ್ನು ವಿರೋಧಿಸುತ್ತಿದ್ದರು. ಗಾಂಧೀಜಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಶಕಗಳಿಂದ ಪ್ರತಿಭಟಿಸಿದ ವ್ಯಕ್ತಿ ಎಂದು ವಿನ್ನೀತ್‌ ಕೊನ್ನಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...