Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...