Homeಮುಖಪುಟಶಾಲೆಗೆ ತಡವಾಗಿ ಬಂದಿದ್ದಕ್ಕೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ : 6ನೇ ತರಗತಿ...

ಶಾಲೆಗೆ ತಡವಾಗಿ ಬಂದಿದ್ದಕ್ಕೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ : 6ನೇ ತರಗತಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕೇವಲ 10 ನಿಮಿಷ ತಡವಾಗಿ ಶಾಲೆಗೆ ಬಂದಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿನಿಗೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದ್ದು, ವಾರದ ಬಳಿಕ ಆ ಬಾಲಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ವಸಾಯಿ ಪ್ರದೇಶದ ಸತಿವಲಿಯ ಶ್ರೀ ಹನುಮಂತ ವಿದ್ಯಾ ಮಂದಿರ ಎಂಬ ಖಾಸಗಿ ಶಾಲೆಯ ಅನ್ಶಿಕಾ ಗೌಡ್‌ (ಕಾಜಲ್‌ ಗೌಡ್‌) ಮೃತ ವಿದ್ಯಾರ್ಥಿನಿ

ನವೆಂಬರ್ 8ರಂದು ಅನ್ಶಿಕಾ ಮತ್ತು ಇತರ ನಾಲ್ವರು ವಿದ್ಯಾರ್ಥಿನಿಯರು 10 ನಿಮಿಷ ತಡವಾಗಿ ಶಾಲೆಗೆ ಆಗಮಿಸಿದ್ದರು. ಈ ಕಾರಣಕ್ಕೆ ಬಾರವಾದ ಬ್ಯಾಗ್‌ ಸಹಿತ 100 ಬಸ್ಕಿ ಹೊಡೆಯು ಶಿಕ್ಷೆಯನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಶಾಲೆಯಿಂದ ಮನೆಗೆ ಆಗಮಿಸಿದ ಅನ್ಶಿಕಾ ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು. ಆಕೆ ಆ ಸಂದರ್ಭದಲ್ಲಿ ವಿಪರೀತ ಕತ್ತು ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು. ಎದ್ದು ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

ನಂತರ, ಬಾಲಕಿಯ ಆರೋಗ್ಯ ಹದೆಗೆಡುತ್ತಾ ಹೋಯಿತು. ಹಾಗಾಗಿ, ಪೋಷಕರು ಆಕೆಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿದ್ದರು. ನವೆಂಬರ್ 14ರಂದು ಶುಕ್ರವಾರ (ಮಕ್ಕಳ ದಿನಾಚರಣೆಯಂದು) ಚಿಕಿತ್ಸೆ ಫಲಿಸದೆ ಅನ್ಶಿಕಾ ಸಾವನ್ನಪ್ಪಿದ್ದಾರೆ.

ಬಾಲಕಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಿರುವಾಗ ಆಕೆಗೆ ಕಠಿಣವಾದ ಶಿಕ್ಷೆ ನೀಡಲಾಗಿದೆ. ಇದರಿಂದ ಆಕೆಯ ಆರೋಗ್ಯ ಇನ್ನಷ್ಟು ಹದೆಗೆಟ್ಟು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿಕ್ಷಕಿ ತನ್ನ ಮಗಳಿಗೆ ಅಮಾನವೀಯ ಶಿಕ್ಷೆ ವಿಧಿಸಿದ್ದಾರೆ ಎಂದು ಬಾಲಕಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗಳ ಆರೋಗ್ಯ ಹದೆಗೆಟ್ಟಾಗ ಶಾಲೆಯವರು ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಬಾಲಕಿಯ ಸಾವಿನ ಕುರಿತು ಆಕೆಯ ಕುಟುಂಬಸ್ಥರು ಇನ್ನೂ ಯಾವುದೇ ಔಪಚಾರಿಕ ದೂರು ನೀಡಿಲ್ಲ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿ ಎಷ್ಟು ಬಸ್ಕಿ ಹೊಡೆದಿದ್ದಾಳೆ. ಅದರಿಂದಾಗಿಯೇ ಆಕೆ ಮೃತಪಟ್ಟಳೋ ಅಥವಾ ಬೇರೆ ಕಾರಣದಿಂದಲೋ ಎಂಬುದು ನಿಜವಾಗಿಯೂ ತಿಳಿದಿಲ್ಲ ಎಂದು ಶಾಲೆಯ ಶಿಕ್ಷಕರೊಬ್ಬರು ಹೇಳಿದ್ದಾರೆ.

ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಪಾಂಡುರಂಗ ಗಲಂಗೆ ತಿಳಿಸಿದ್ದಾರೆ. ವಾಲಿವ್ (ಪಾಲ್ಘರ್) ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಆದರೆ, ನವೆಂಬರ್ 16 ರವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಎಂಎನ್ಎಸ್ ಕಾರ್ಯಕರ್ತರು ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಶಾಲೆಯ ಗೇಟುಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಶಾಲೆಯನ್ನು ಮತ್ತೆ ತೆರೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಮರಣದಂಡನೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...