Homeಮುಖಪುಟಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ...

ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

- Advertisement -
- Advertisement -

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 31 ರಿಂದ ಅಕ್ಟೋಬರ್ 30ರವರೆಗೆ ನಿಗದಿತ ಮೂರು ತಿಂಗಳೊಳಗೆ ನಿರ್ಧರಿಸಲು ವಿಫಲವಾದ ಕಾರಣ ತೆಲಂಗಾಣ ಸ್ಪೀಕರ್‌ ವಿರುದ್ದ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸ್ಪೀಕರ್ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. “ಈ ವಿಷಯವನ್ನು ನಿರ್ಧರಿಸಬೇಕೆ ಅಥವಾ ನ್ಯಾಯಾಂಗ ನಿಂದನೆ ಎದುರಿಸಬೇಕೆ ಎಂಬುದು ಅವರ (ತೆಲಂಗಾಣ ಸ್ಪೀಕರ್) ವೈಯಕ್ತಿಕ ವಿಷಯ. ಇದು ನ್ಯಾಯಾಂಗ ನಿಂದನೆಯಾಗಿದೆ” ಎಂದು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠ ಹೇಳಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 10 ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಮೂರು ತಿಂಗಳೊಳಗೆನಿರ್ಧರಿಸುವಂತೆ ನ್ಯಾಯಾಲಯ ಜುಲೈ 31 ರಂದು ಸ್ಪೀಕರ್‌ಗೆ ನಿರ್ದೇಶನ ನೀಡಿತ್ತು.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಎಲ್ಲಾ ವಿಷಯಗಳಲ್ಲಿ ನೋಟಿಸ್‌ಗಳನ್ನು ಜಾರಿಗೊಳಿಸಿದ್ದು, ಎರಡು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಅಥವಾ ನ್ಯಾಯಾಂಗ ನಿಂದನೆಯನ್ನು ಎದುರಿಸುವಂತೆ ಸ್ಪೀಕರ್‌ಗೆ ಹೇಳಿದೆ. ಇಂತಹ ವಿಷಯಗಳನ್ನು ನಿರ್ಧರಿಸುವಲ್ಲಿ ಸ್ಪೀಕರ್‌ಗೆ ಸಾಂವಿಧಾನಿಕ ವಿನಾಯಿತಿ ಇಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

“ಸ್ಪೀಕರ್ ತಮ್ಮ ಹೊಸ ವರ್ಷದ ಸಂಭ್ರಮವನ್ನು ಎಲ್ಲಿ ಆಚರಿಸಬೇಕು” ಎಂದು ಅವರೇ ನಿರ್ಧರಿಸಲಿ” ಎಂದು ಹೇಳಿದ ಸಿಜೆಐ, ಸಂಭವನೀಯ ಪರಿಣಾಮಗಳ ಬಗ್ಗೆಯೂ ಸುಳಿವು ನೀಡಿದ್ದಾರೆ.

ಬಿಆರ್‌ಎಸ್ ನಾಯಕರಾದ ಕೆ.ಟಿ. ರಾಮರಾವ್, ಪಾಡಿ ಕೌಶಿಕ್ ರೆಡ್ಡಿ ಮತ್ತು ಕೆ.ಒ. ವಿವೇಕಾನಂದ್ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಅಂಗೀಕರಿಸಿದ್ದ ಪೀಠ, ರಾಜಕೀಯ ಪಕ್ಷಾಂತರಗಳು ರಾಷ್ಟ್ರೀಯ ಕಾಳಜಿಯ ವಿಷಯವಾಗಿದ್ದು, ಅದನ್ನು ತಡೆಯದಿದ್ದರೆ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸಬಹುದು ಎಂದು ಹೇಳಿತ್ತು.

“ಪ್ರಸ್ತುತ ಮೇಲ್ಮನವಿಯನ್ನು ನಾವು ಅಂಗೀಕರಿಸಲು ಒಲವು ತೋರುತ್ತೇವೆ. ಹೈಕೋರ್ಟ್ ವಿಭಾಗೀಯ ಪೀಠವು 2024ರ ನವೆಂಬರ್ 22ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ. 10 ಶಾಸಕರ ವಿರುದ್ಧದ ಅನರ್ಹತಾ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಮತ್ತು 3 ತಿಂಗಳೊಳಗೆ ನಿರ್ಧರಿಸಬೇಕು. ಯಾವುದೇ ಶಾಸಕರಿಗೆ ವಿಚಾರಣೆಯನ್ನು ಮುಂದೂಡಲು ಅವಕಾಶ ನೀಡಬಾರದು. ಹಾಗೆ ಮಾಡಿದರೆ, ಸ್ಪೀಕರ್ ಪ್ರತಿಕೂಲ ತೀರ್ಮಾನಗಳನ್ನು ಎದುರಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು.

ವಿಚಾರಣೆಗಳನ್ನು ನಿಗದಿಪಡಿಸುವ ಏಕಸದಸ್ಯ ನ್ಯಾಯಾಧೀಶರ ನಿರ್ದೇಶನವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಬದಿಗಿಟ್ಟಿದ್ದ ಸುಪ್ರೀಂ ಕೋರ್ಟ್, ಯಾವುದೇ ಶಾಸಕರಿಗೆ ಅನರ್ಹತೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಒತ್ತಿ ಹೇಳಿತ್ತು.

ಶಾಸಕರ ಅನರ್ಹತೆಗೆ ಪ್ರಸ್ತುತ ಇರುವ ಕಾರ್ಯವಿಧಾನವನ್ನು ಸಂಸತ್ತು ಪರಿಶೀಲಿಸಬೇಕು. ಸ್ಪೀಕರ್‌ಗಳು ಆಗಾಗ್ಗೆ ಇಂತಹ ಪ್ರಕರಣಗಳನ್ನು ವಿಳಂಬ ಮಾಡುತ್ತಾರೆ, ಪಕ್ಷಾಂತರಿಗಳ ವಿರುದ್ಧದ ಕ್ರಮವನ್ನು ದುರ್ಬಲಗೊಳಿಸುತ್ತಾರೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದಿತ್ತು.

ಬಾಕಿ ಇರುವ ಅನರ್ಹತೆ ಪ್ರಕರಣಗಳ ಕುರಿತು ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಬಿಆರ್‌ಎಸ್ ನಾಯಕರು ಸಲ್ಲಿಸಿದ್ದ ಅರ್ಜಿಗಳು ಕೋರಿವೆ. ಅರ್ಜಿಗಳು ಸಲ್ಲಿಕೆಯಾದ ಏಳು ತಿಂಗಳ ನಂತರ, ನ್ಯಾಯಾಲಯ ಮಧ್ಯಪ್ರವೇಶಿಸಿದ ನಂತರವೇ ಸ್ಪೀಕರ್ ನೋಟಿಸ್ ನೀಡಿದ್ದು ‘ದುರದೃಷ್ಟಕರ’ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ಅಧಿಕಾರ ವ್ಯಾಪ್ತಿಗೆ ಒಳಪಟ್ಟ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಪುನರುಚ್ಚರಿಸಿದ್ದು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಯಾವುದೇ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುವುದಿಲ್ಲ” ಎಂದು ತಿಳಿಸಿದೆ.

ಅನರ್ಹತೆ ಎದುರಿಸುತ್ತಿರುವ ಶಾಸಕರು ಕಲಾಪವನ್ನು ದೀರ್ಘಗೊಳಿಸಲು ಅವಕಾಶ ನೀಡಬಾರದು ಎಂದು ಸ್ಪೀಕರ್‌ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ವಿಳಂಬ ಮಾಡುವ ಯಾವುದೇ ಪ್ರಯತ್ನವು ಪ್ರತಿಕೂಲ ತೀರ್ಮಾನಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...