Homeಮುಖಪುಟದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ 'ಸಾಮೂಹಿಕ ಅನುಮಾನ'; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ...

ದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ‘ಸಾಮೂಹಿಕ ಅನುಮಾನ’; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ ಒತ್ತಾಯ

- Advertisement -
- Advertisement -

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟದ ನಂತರ ಹಲವಾರು ಉತ್ತರ ರಾಜ್ಯಗಳಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳು ಬೆದರಿಕೆ ಎದುರಿಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್‌ಎ) ಸೋಮವಾರ ಆರೋಪಿಸಿದೆ. ಸಾಮೂಹಿಕ ನಿಂದನೆ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಕೆಎಸ್‌ಎ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹೇಹಾಮಿ, “ದಾಳಿಯ ನಂತರ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ರಾಜ್ಯಗಳಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಕಿರುಕುಳಕ್ಕೊಳಗಾಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕಾಶ್ಮೀರ ವಿದ್ಯಾರ್ಥಿಗಳು ಭಯೋತ್ಪಾದನೆಯಲ್ಲಿ ಅಲ್ಲ, ಭಾರತದ ಪ್ರಜಾಪ್ರಭುತ್ವ ಮತ್ತು ಮುಖ್ಯವಾಹಿನಿಯಲ್ಲಿ ನಂಬಿಕೆ ಇಡುತ್ತಾರೆ. ಆದರೆ ಅವರನ್ನು ಅಧಿಕಾರಿಗಳು ಮತ್ತು ರಾಜ್ಯಗಳಾದ್ಯಂತ ಸ್ಥಳೀಯ ಜನರು ನಿಂದಿಸುತ್ತಿದ್ದಾರೆ. ಅನೇಕ ಮನೆಮಾಲೀಕರು ಕಾಶ್ಮೀರಿ ಬಾಡಿಗೆದಾರರನ್ನು ತಮ್ಮ ಕೊಠಡಿಗಳನ್ನು ಖಾಲಿ ಮಾಡುವಂತೆ ಕೇಳಿಕೊಂಡಿದ್ದಾರೆ, ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ಭಯದಿಂದ ಮನೆಗೆ ಮರಳಬೇಕಾಯಿತು” ಎಂದು ಖುಹೇಹಾಮಿ ಹೇಳಿದರು.

ಸ್ಫೋಟದ ಬಗ್ಗೆ ಯಾವುದೇ ತನಿಖೆಗೆ ತಮ್ಮ ಸಂಘಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಕೇಂದ್ರವು ಕಾಶ್ಮೀರಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕವಾಗಿ ಎದ್ದಿರುವ ಸಾಮೂಹಿಕ ಅನುಮಾನವನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದರು.

“ಪ್ರಧಾನ ಮಂತ್ರಿಗಳು ಸಾರ್ವಜನಿಕ ಹೇಳಿಕೆ ನೀಡಬೇಕೆಂದು ನಾವು ವಿನಂತಿಸುತ್ತೇವೆ. ಕಾಶ್ಮೀರಿಗಳು ಇತರ ನಾಗರಿಕರಂತೆ ಈ ದೇಶದ ಭಾಗ” ಎಂದು ಅವರು ಹೇಳಿದರು.

ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟವನ್ನು ಜೆಕೆಎಸ್ಎ ತೀವ್ರ ಪದಗಳಲ್ಲಿ ಖಂಡಿಸಿ, ನ್ಯಾಯಯುತ ತನಿಖೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿತು.

ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ 13 ಜನರ ಸಾವಿಗೆ ಕಾರಣವಾದ ಕಾರು ಸ್ಫೋಟವು ದೆಹಲಿ ಪೊಲೀಸ್ ವಿಶೇಷ ಕೋಶ, ಎನ್‌ಐಎ ಮತ್ತು ಅಪರಾಧ ಶಾಖೆಯನ್ನು ಒಳಗೊಂಡ ವ್ಯಾಪಕ, ಬಹು-ಸಂಸ್ಥೆ ತನಿಖೆಗೆ ನಾಂದಿ ಹಾಡಿದೆ. ತನಿಖೆಯ ಭಾಗವಾಗಿ ಹರಿಯಾಣದ ಅಲ್ ಫಲಾ ವಿಶ್ವವಿದ್ಯಾಲಯದ ಇಬ್ಬರು ವೈದ್ಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಯುಜಿಸಿ ಮತ್ತು ಎನ್‌ಎಎಸಿ ಗುರುತಿಸಿದ ನಿಯಂತ್ರಕ ಉಲ್ಲಂಘನೆಗಳ ನಂತರ ಪೊಲೀಸರು ಅಲ್ ಫಲಾ ವಿಶ್ವವಿದ್ಯಾಲಯದ ವಿರುದ್ಧ ವಂಚನೆ ಮತ್ತು ನಕಲಿ ಆರೋಪದ ಅಡಿಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಪರಿಶೀಲನೆಯಲ್ಲಿರುವ ವ್ಯಕ್ತಿಗಳ ವಿವರಗಳನ್ನು ಸಂಗ್ರಹಿಸಲು ಪೊಲೀಸ್ ತಂಡ ಶನಿವಾರ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಗೆ ಭೇಟಿ ನೀಡಿತು.

ಬಂಧಿತ ವೈದ್ಯರಾದ ಮೊಹಮ್ಮದ್ ಮತ್ತು ಮುಸ್ತಕೀಮ್, ಸ್ಫೋಟಗೊಂಡ ಕಾರಿನ ಚಾಲಕ ಡಾ. ಉಮರ್ ನಬಿಗೆ ಪರಿಚಿತರಾಗಿದ್ದರು. ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲ್ಪಟ್ಟಿದ್ದ ಡಾ. ಮುಜಮ್ಮಿಲ್ ಗನೈ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶಾಲವಾದ ಪಿತೂರಿಯಲ್ಲಿ ಅವರ ಸಂಭಾವ್ಯ ಪಾತ್ರವನ್ನು ನಿರ್ಣಯಿಸಲು ಅವರ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ.

ರಸಗೊಬ್ಬರವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಹೊತ್ತಿರುವ ಫರಿದಾಬಾದ್ ಮೂಲದ ವ್ಯಕ್ತಿಯ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಏಕೆಂದರೆ, ಎನ್‌ಪಿಕೆ ರಸಗೊಬ್ಬರ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪಡೆಯಲು ಮಾಡ್ಯೂಲ್ ಸುಮಾರು 26 ಲಕ್ಷ ರೂ.ಗಳನ್ನು ಸಂಗ್ರಹಿಸಿದೆ ಎಂದು ಪುರಾವೆಗಳಿಂದ ಕಂಡುಬಂದಿದೆ.

ಸ್ಫೋಟದ ನಂತರ, ಹೆಚ್ಚಿನ ಭದ್ರತಾ ಕ್ರಮಗಳ ಭಾಗವಾಗಿ ಫರಿದಾಬಾದ್‌ನಲ್ಲಿ ಮಾತ್ರ ಜಮ್ಮು ಮತ್ತು ಕಾಶ್ಮೀರದಿಂದ 500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭಿಕ ಯುಎಪಿಎ ಎಫ್‌ಐಆರ್ ಅನ್ನು ತನಿಖಾ ಸಂಸ್ಥೆಗೆ ವರ್ಗಾಯಿಸಿದ ನಂತರ ಎನ್‌ಐಎ ಈಗ ವ್ಯಾಪಕ ಪಿತೂರಿಯನ್ನು ತನಿಖೆ ಮಾಡುತ್ತಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...