Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...