Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...