Homeಅಂತರಾಷ್ಟ್ರೀಯಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಬೇಡಿಕೆ: ಭಾರತ ಹೇಳಿದ್ದೇನು?

ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಬೇಡಿಕೆ: ಭಾರತ ಹೇಳಿದ್ದೇನು?

ಹಸೀನಾ ಭಾರತದಲ್ಲೇ ಇದ್ದಾರಾ?

- Advertisement -
- Advertisement -

ಮಾನವೀಯತೆಯ ವಿರುದ್ಧದ ಅಪರಾಧ ಪ್ರಕರಣದಲ್ಲಿ ಮಾಜಿ ಪ್ರಧಾನಿ (ಪದಚ್ಯುತ) ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಅವರಿಗೆ ಮರಣದಂಡನೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್ 17) ಆದೇಶಿಸಿದೆ.

ಶಿಕ್ಷೆ ಘೋಷಣೆಯಾದ ಬಳಿಕ ಹಸೀನಾ ಮತ್ತು ಅಸಾದುಝ್ಝಮಾನ್ ಅವರನ್ನು ಹಸ್ತಾಂತರಿಸುವಂತೆ ಅಥವಾ ಗಡಿಪಾರು ಮಾಡುವಂತೆ ಬಾಂಗ್ಲಾದೇಶ ಭಾರತದ ಬಳಿ ಬೇಡಿಕೆಯಿಟ್ಟಿದೆ. ಹಸೀನಾ ಭಾರತದಲ್ಲೇ ರಕ್ಷಣೆ ಪಡೆದಿದ್ದಾರೆ ಎನ್ನುವುದು ಬಾಂಗ್ಲಾದ ಬಲವಾದ ವಾದವಾಗಿದೆ. ಈ ಹಿಂದೆಯೂ ಬಾಂಗ್ಲಾ ಈ ಬೇಡಿಕೆಯನ್ನು ಭಾರತದ ಮುಂದಿಟ್ಟಿತ್ತು.

ಹಸೀನಾ ಅವರಿಗೆ ಶಿಕ್ಷೆ ಘೋಷಣೆಯಾದ ಬಳಿಕ, ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, “ಬಾಂಗ್ಲಾದೇಶದ ಢಾಕಾದಲ್ಲಿರುವ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ ನೀಡಿರುವ ತೀರ್ಪನ್ನು ಭಾರತ ಔಪಚಾರಿಕವಾಗಿ ಗಮನಿಸಿದೆ. ಭಾರತ ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ” ಎಂದು ಹೇಳಿದೆ.

ಮುಂದುವರಿದು, “ಭಾರತವು ಬಾಂಗ್ಲಾದೇಶದ ಒಳ್ಳೆಯ ಸ್ನೇಹಿತ ಮತ್ತು ನೆರೆಯ ದೇಶವಾಗಿ, ಅಲ್ಲಿನ ಜನರ ಒಳಿತಿಗಾಗಿ ಯಾವಾಗಲೂ ಕೆಲಸ ಮಾಡುತ್ತದೆ. ಬಾಂಗ್ಲಾದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ, ಎಲ್ಲರಿಗೂ ಸಮಾನ ಅವಕಾಶ ಮತ್ತು ಸ್ಥಿರತೆ ಇರುವಂತೆ ನೋಡಿಕೊಳ್ಳಲು ಭಾರತ ಬದ್ಧವಾಗಿದೆ. ಈ ಉದ್ದೇಶದಿಂದ ಯಾರೇ ಆ ದೇಶದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ಅವರೆಲ್ಲರೊಂದಿಗೂ ಒಳ್ಳೆಯ ರೀತಿಯಲ್ಲಿ ಸಹಕಾರ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದೆ.

ಭಾರತ-ಬಾಂಗ್ಲಾದೇಶ ನಡುವಿನ ಆರೋಪಿಗಳನ್ನು ಹಿಂದಿರುಗಿಸುವ ಒಪ್ಪಂದವನ್ನು (extradition treaty)ಉಲ್ಲೇಖಿಸಿರುವ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ, ಹಸೀನಾ ಮತ್ತು ಅಸಾದುಝ್ಝಮಾನ್ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಆಗ್ರಹಿಸಿದೆ.

“ಯಾವುದೇ ದೇಶ ಹಸೀನಾ ಅವರಿಗೆ ರಕ್ಷಣೆ ಒದಗಿಸಿದರೆ ಅದು ‘ಅತ್ಯಂತ ಸ್ನೇಹಪರವಲ್ಲದ ಕೃತ್ಯ ಮತ್ತು ನ್ಯಾಯದ ನಿರ್ಲಕ್ಷ್ಯ’ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಹೇಳಿದೆ. ಈ ಮೂಲಕ ಭಾರತದ ಮೇಲೆ ಪರೋಕ್ಷ ಒತ್ತಡ ಹಾಕಿದೆ.

ಈ ಹಿಂದೆ ಭಾರತದ ವಿದೇಶಾಂಗ ಕಾರ್ಯದರ್ಶಿ ಭೇಟಿ ನೀಡಿದ್ದ ಎರಡು ವಾರಗಳ ನಂತರ, ಅಂದರೆ 2024 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶವು ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಔಪಚಾರಿಕ ಮನವಿ ಮಾಡಿತ್ತು.

2013ರಲ್ಲಿ ಭಾರತ-ಬಾಂಗ್ಲಾದೇಶ ನಡುವೆ ಮಾಡಿಕೊಂಡಿರುವ ಆರೋಪಿಗಳ ಹಿಂದಿರುಗಿಸುವ ಒಪ್ಪಂದದ (extradition treaty)ಪ್ರಕಾರ, ಯಾವುದೇ ವ್ಯಕ್ತಿಯನ್ನು ಹಿಂದಿರುಗಿಸುವ ಬೇಡಿಕೆ ರಾಜಕೀಯ ಉದ್ದೇಶದಿಂದ (politically motivated)ಕೂಡಿದೆ ಎಂದು ತೋರಿದರೆ ಅದನ್ನು ತಿರಸ್ಕರಿಸಬಹುದು.

ಕಳೆದ ವರ್ಷ ದೇಶ ತೊರೆದು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎನ್ನಲಾದ ಶೇಖ್ ಹಸೀನಾ ಅವರು, “ನನ್ನ ಮೇಲಿನ ಎಲ್ಲಾ ಆರೋಪಗಳು ಸಂಪೂರ್ಣ ರಾಜಕೀಯ ದ್ವೇಷದಿಂದ ಕೂಡಿದೆ” ಎಂದು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ.

ಒಪ್ಪಂದದ ಅನುಚ್ಛೇದ 6ರ ಪ್ರಕಾರ, “ಹಸೀನಾ ಮೇಲಿನ ಆರೋಪ ಮತ್ತು ಘೋಷಣೆ ಮಾಡಿರುವ ಶಿಕ್ಷೆ ನಿಜವಾಗಿಯೂ ನ್ಯಾಯಯುತವಾಗಿದೆಯೇ, ಇಲ್ಲ ರಾಜಕೀಯ ದುರುದ್ದೇಶದಿಂದ ಕೂಡಿದೆಯೇ ಎಂದು ಭಾರತ ಪರೀಕ್ಷಿಸಬಹುದು.

ಹಸೀನಾ ಮೇಲಿನ ಆರೋಪ ಸತ್ಯ, ಒಳ್ಳೆಯ ಭಾವನೆ ಮತ್ತು ನಿಜವಾದ ನ್ಯಾಯದ ಹಿತಾಸಕ್ತಿಯಿಂದ ಕೂಡಿರದಿದ್ದರೆ ಭಾರತ ಹಸೀನಾ ಅವರನ್ನು ಹಸ್ತಾಂತರಿಸುವ ಬೇಡಿಕೆಯನ್ನು ತಿರಸ್ಕರಿಸಬಹುದು ಎಂದು ವರದಿಗಳು ಹೇಳಿವೆ.

ಹಸೀನಾ ಭಾರತದಲ್ಲೇ ಇರುವುದು ನಿಜಾನಾ?

ಕಳೆದ ವರ್ಷ (2024ರ ಆಗಸ್ಟ್‌ನಲ್ಲಿ) ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ಚಳವಳಿಯ ಗಲಭೆಯ ನಂತರ ಹಸೀನಾ ಅವರು ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ. ಈಗಲೂ (2025ರ ನವೆಂಬರ್ 18ರಂತೆ) ಅವರು ನವದೆಹಲಿಯಲ್ಲಿ ಭಾರೀ ಭದ್ರತೆಯೊಂದಿಗೆ ವಾಸಿಸುತ್ತಿದ್ದಾರೆ ಎಂದು ವಿವಿಧ ವರದಿಗಳು (ಉದಾ: ಇಂಡಿಯಾ ಟುಡೇ, ಝೀ ನ್ಯೂಸ್, ದಿ ಹಿಂದೂ, ಟೈಮ್ಸ್ ಆಫ್ ಇಂಡಿಯಾ) ದೃಢಪಡಿಸಿವೆ.

ಬಾಂಗ್ಲಾದೇಶದ ಸರ್ಕಾರ ಹಸೀನಾ ಅವರನ್ನು ತಮಗೆ ಹಸ್ತಾಂತರಿಸುವಂತೆ ಭಾರತಕ್ಕೆ ಬೇಡಿಕೆ ಇಟ್ಟಿದೆ. ಆದರೆ, ಭಾರತ ಇನ್ನೂ ಅವರನ್ನು ರಕ್ಷಿಸುತ್ತಿದೆ ಮತ್ತು ಯಾವುದೇ ಹಸ್ತಾಂತರ ನಿರ್ಧಾರ ತೆಗೆದುಕೊಂಡಿಲ್ಲ. ಹಸೀನಾ ಈಗ ಇರುವ ನಿಖರ ಸ್ಥಳವನ್ನು ಭಾರತ ಸರ್ಕಾರ ರಹಸ್ಯವಾಗಿಟ್ಟುಕೊಂಡಿದೆ. ಆದರೆ, ಅವರು ದೆಹಲಿಯ ಉನ್ನತ ಭದ್ರತಾ ಪ್ರದೇಶದಲ್ಲಿ (Lutyens’ Bungalow Zone) ಇದ್ದಾರೆ ಎಂದು ವರದಿಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...