Homeಕರ್ನಾಟಕಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ..' ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು.

ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಚೈತನ್ಯಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

“ಭಗವದ್ಗೀತೆ ಎನ್ನುವುದೇ ಒಂದು ಅಪ್ರಸ್ತುತ ಹಾಗೂ ಹಳೆಯ ವಿಚಾರ, ಶತಶತಮಾನಗಳಿಂದ ವರ್ಣಾಶ್ರಮವನ್ನು ಪಾಲಿಸಿಕೊಂಡು ಬಂದಿರುವ ಸಿದ್ಧಾಂತ. ಈಗ, ದೇಶದಲ್ಲಿ ಸಂವಿಧಾನ ಜಾರಿಯಲ್ಲಿದೆ. ಗಂಭೀರ ಅಪರಾಧವೊಂದನ್ನು ಮಾಡುವುದಕ್ಕೆ ಉರಿದುಂಬಿಸುವ ಜೊತೆಗೆ ವರ್ಣಾಶ್ರಮವನ್ನು ಸಮರ್ಥನೆ ಮಾಡಿಕೊಳ್ಳುವುದೇ ಭಗದ್ಗೀತೆಯ ಒಟ್ಟು ಸಾರಾಂಶ. ಆದ್ದರಿಂದ, ವಿಶ್ವವಿದ್ಯಾಲಯದ ಒಳಗೆ ಈ ಕುರಿತ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಏಕೆಂದರೆ, ಇಲ್ಲಿ ಬೇರೆಬೇರೆ ಜಾತಿ ಮತ್ತು ಧರ್ಮದ ಮಕ್ಕಳು ಓದುತ್ತಿದ್ದಾರೆ. ನಾಳೆ ಬೇರೆಯವರು ಬಂದು ಕುರಾನ್-ಬೈಬಲ್ ನಲ್ಲಿ ಒಳ್ಳೆಯ ಅಂಶಗಳಿವೆ ಎಂದು ಕೇಳಿದರೆ ವಿವಿ ಏನು ಮಾಡುತ್ತದೆ” ಎಂದು ಪ್ರಶ್ನಿಸಿದರು.

ನಾಳಿನ ಕಾರ್ಯಕ್ರಮವನ್ನು ಬರಗೂರು ರಾಮಚಂದ್ರಪ್ಪ ಬಹಿಷ್ಕರಿಸಲಿ

“ಉಪ ಕುಲಪತಿಗಳು ಮೂಲಭೂತವಾದಿತನವನ್ನು ಮೈಗೂಡಿಸಿಕೊಂಡಿದ್ದಾರೆ. ನಾಳೆ ವಿವಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ವರ್ಷ ನಾಡು ಕಟ್ಟುವ ಕೆಲಸ ಮಾಡಿರುವ ಬರಗೂರು ರಾಮಚಂದ್ರಪ್ಪ ಅವರು, ಇಂತಹ ಕೋಮುವಾದಿ, ಜಾತಿವಾದಿ ಹಾಗೂ ಮೂಲಭೂತವಾದಿಯಾಗಿರುವ ವಿಸಿ ಶರತ್ ಅನಂತ್‌ಮೂರ್ತಿ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಬಾರದು. ಅವರು ಕಾರ್ಯಕ್ರಮಕ್ಕೆ ಬರಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ” ಎಂದರು.

“ಕರ್ನಾಟಕ ಸರ್ಕಾರ ವಿಸಿ ಶರತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಏಕೆಂದರೆ, ನನ್ನದು ‘ಮಾನವ ಜಾತಿ’ ಎಂದು ಕುವೆಂಪು ಹೇಳಿದ್ದರು. ಯಾವುದೇ ಧರ್ಮಗ್ರಂಥ ಪೂಜನೀಯ ಆಗಬಾರದು ಎಂದು ಹೇಳಿದ್ದರು. ಅವರ ಹೆಸರಿನ ವಿಶ್ವವಿದ್ಯಾಲಯದೊಳಗೆ ಸನಾತನಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಬಾರದಿತ್ತು. ಅಂಬೇಡ್ಕರ್ ಮತ್ತು ಕುವೆಂಪು ಅವರೂ ಸಹ ಸನಾತನ ಧರ್ಮವನ್ನು ವಿರೋಧಿದ್ದರು. ಇಷ್ಟೆಲ್ಲಾ ಇರುವಾಗ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರುವುದು ಸರಿಯಲ್ಲ. ವಿಶ್ವವಿದ್ಯಾಲಯದ ಯಾವುದೇ ವಿದ್ವಾಂಸರಿಲ್ಲದೇ, ಕದ್ದುಮುಚ್ಚಿ ಕಾರ್ಯಕ್ರಮ ಮಾಡುತ್ತಿರುವುದು ಯಾಕೆ? ವಿವಿ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಿ ಕಾರ್ಯಕ್ರಮ ಮಾಡುವ ಮೂಲಕ ಉಪ ಕುಲಪತಿಗಳು ಕುವೆಂಪು ಆಶಯಗಳಿಗೆ ವಿರುದ್ಧವಾಗಿ ನಿತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...