Homeರಾಷ್ಟ್ರದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ...

ದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ ವೈರಲ್

- Advertisement -
- Advertisement -

ದೆಹಲಿ ಕಾರ್ ಸ್ಫೋಟಕ್ಕೂ ಮೊದಲು ಉಗ್ರ ಡಾ. ಉಮರ್-ಉನ್-ನಬಿ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾತನಾಡಿದ್ದ ವಿಡಿಯೋವೊಂದು ಹೊರಬಿದ್ದಿದೆ. 

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳುತ್ತಾನೆ. ಜೊತೆಗೆ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ಕರೆದಿದ್ದಾರೆ. 

ಈ ಬಗ್ಗೆ ವಿವರಿಸುತ್ತಾ ಆತ್ಮಾಹತ್ಯಾ ಬಾಂಬ್ ದಾಳಿಯನ್ನು ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬ್ ದಾಳಿ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಆತ್ಮಹತ್ಯೆಗೆ ಇಸ್ಲಾಂನಲ್ಲಿ ವಿರೋಧವಿದೆ ಎನ್ನುತ್ತಾರೆ. ಆದರೆ ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ” ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾನೆ.

“ಹುತಾತ್ಮತೆ” ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾನೆ. ಅಲ್ಲದೆ “ಸಾವಿಗೆ ಭಯಪಡಬೇಡಿ” ಎಂದು ಸಹ ವೈದ್ಯ ಹೇಳುತ್ತಾನೆ. 

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು “ಹುತಾತ್ಮತೆ”ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಉಮರ್ ಆತ್ಮಹತ್ಯಾ ಬಾಂಬ್ ದಾಳಿ ಮತ್ತು “ಹುತಾತ್ಮತೆ” ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದನೆಂದು ತಿಳಿಯುತ್ತದೆ.ದಲ್ಲಿ

ಅಲ್ಲದೆ ಆಥ ಸಂಪೂರ್ಣವಾಗಿ ಮೂಲಭೂತವಾದಿಯಾಗಿದ್ದನೆಂಬುದನ್ನು ಸೂಚಿಸುತ್ತದೆ. ವಿಡಿಯೋದಲ್ಲಿ ಶಾಂತ, ಸಂಯಮದ ವ್ಯಕ್ತಿಯಂತೆ ಕಾಣಿಸುಕೊಂಡಿರುವ ಉಮರ್ ನಬಿ, ಆ ಮೂಲಕ ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...