Homeರಾಷ್ಟ್ರದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ...

ದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ ವೈರಲ್

- Advertisement -
- Advertisement -

ದೆಹಲಿ ಕಾರ್ ಸ್ಫೋಟಕ್ಕೂ ಮೊದಲು ಉಗ್ರ ಡಾ. ಉಮರ್-ಉನ್-ನಬಿ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾತನಾಡಿದ್ದ ವಿಡಿಯೋವೊಂದು ಹೊರಬಿದ್ದಿದೆ. 

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳುತ್ತಾನೆ. ಜೊತೆಗೆ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ಕರೆದಿದ್ದಾರೆ. 

ಈ ಬಗ್ಗೆ ವಿವರಿಸುತ್ತಾ ಆತ್ಮಾಹತ್ಯಾ ಬಾಂಬ್ ದಾಳಿಯನ್ನು ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬ್ ದಾಳಿ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಆತ್ಮಹತ್ಯೆಗೆ ಇಸ್ಲಾಂನಲ್ಲಿ ವಿರೋಧವಿದೆ ಎನ್ನುತ್ತಾರೆ. ಆದರೆ ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ” ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾನೆ.

“ಹುತಾತ್ಮತೆ” ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾನೆ. ಅಲ್ಲದೆ “ಸಾವಿಗೆ ಭಯಪಡಬೇಡಿ” ಎಂದು ಸಹ ವೈದ್ಯ ಹೇಳುತ್ತಾನೆ. 

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು “ಹುತಾತ್ಮತೆ”ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಉಮರ್ ಆತ್ಮಹತ್ಯಾ ಬಾಂಬ್ ದಾಳಿ ಮತ್ತು “ಹುತಾತ್ಮತೆ” ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದನೆಂದು ತಿಳಿಯುತ್ತದೆ.ದಲ್ಲಿ

ಅಲ್ಲದೆ ಆಥ ಸಂಪೂರ್ಣವಾಗಿ ಮೂಲಭೂತವಾದಿಯಾಗಿದ್ದನೆಂಬುದನ್ನು ಸೂಚಿಸುತ್ತದೆ. ವಿಡಿಯೋದಲ್ಲಿ ಶಾಂತ, ಸಂಯಮದ ವ್ಯಕ್ತಿಯಂತೆ ಕಾಣಿಸುಕೊಂಡಿರುವ ಉಮರ್ ನಬಿ, ಆ ಮೂಲಕ ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...