Homeರಾಷ್ಟ್ರದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ...

ದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ ವೈರಲ್

- Advertisement -
- Advertisement -

ದೆಹಲಿ ಕಾರ್ ಸ್ಫೋಟಕ್ಕೂ ಮೊದಲು ಉಗ್ರ ಡಾ. ಉಮರ್-ಉನ್-ನಬಿ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾತನಾಡಿದ್ದ ವಿಡಿಯೋವೊಂದು ಹೊರಬಿದ್ದಿದೆ. 

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳುತ್ತಾನೆ. ಜೊತೆಗೆ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ಕರೆದಿದ್ದಾರೆ. 

ಈ ಬಗ್ಗೆ ವಿವರಿಸುತ್ತಾ ಆತ್ಮಾಹತ್ಯಾ ಬಾಂಬ್ ದಾಳಿಯನ್ನು ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬ್ ದಾಳಿ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಆತ್ಮಹತ್ಯೆಗೆ ಇಸ್ಲಾಂನಲ್ಲಿ ವಿರೋಧವಿದೆ ಎನ್ನುತ್ತಾರೆ. ಆದರೆ ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ” ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾನೆ.

“ಹುತಾತ್ಮತೆ” ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾನೆ. ಅಲ್ಲದೆ “ಸಾವಿಗೆ ಭಯಪಡಬೇಡಿ” ಎಂದು ಸಹ ವೈದ್ಯ ಹೇಳುತ್ತಾನೆ. 

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು “ಹುತಾತ್ಮತೆ”ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಉಮರ್ ಆತ್ಮಹತ್ಯಾ ಬಾಂಬ್ ದಾಳಿ ಮತ್ತು “ಹುತಾತ್ಮತೆ” ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದನೆಂದು ತಿಳಿಯುತ್ತದೆ.ದಲ್ಲಿ

ಅಲ್ಲದೆ ಆಥ ಸಂಪೂರ್ಣವಾಗಿ ಮೂಲಭೂತವಾದಿಯಾಗಿದ್ದನೆಂಬುದನ್ನು ಸೂಚಿಸುತ್ತದೆ. ವಿಡಿಯೋದಲ್ಲಿ ಶಾಂತ, ಸಂಯಮದ ವ್ಯಕ್ತಿಯಂತೆ ಕಾಣಿಸುಕೊಂಡಿರುವ ಉಮರ್ ನಬಿ, ಆ ಮೂಲಕ ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...